Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...