Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....