Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...