Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...