Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...