Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...