Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...