Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...