Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...