Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...