Homeಮುಖಪುಟಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

ಪಂಜಾಬ್ ಕಾಂಗ್ರೆಸ್‌ ಭಿನ್ನಮತ ಶಮನ: ಕೇಜ್ರಿವಾಲ್ ವಿರುದ್ಧ ಸಿಧು ಟ್ವೀಟ್‌ ವಾರ್

- Advertisement -
- Advertisement -

ಕಳೆದ ಕೆಲವು ತಿಂಗಳಿನಿಂದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ನಡೆಯುತ್ತಿದ್ದ ರಾಜಕೀಯ ಕಿತ್ತಾಟ ಅಂತ್ಯವಾಗುವ ಲಕ್ಷಣ ಕಾಣಿಸಿಕೊಳ್ಳತೊಡಗಿದೆ. ನವಜೋತ್ ಸಿಂಗ್ ಸಿದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮೇಲಿನ ಮುನಿಸನ್ನು ಮರೆತು ಕಾಂಗ್ರೆಸ್‌ ಪಕ್ಷದ ಪರವಾಗಿ ಹೇಳಿಕೆಗಳನ್ನು ನೀಡತೊಡಗಿದ್ದಾರೆ. ಇದಕ್ಕೆ ಸೂಚನೆಯೆಂಬಂತೆ  ಸಿಧು ಟ್ವಿಟರ್ ಮೂಲಕ ಶಿರೋಮಣಿ ಅಕಾಲಿ ದಳ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್‌ನಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ಟ್ವೀಟ್‌ ಮಾಡಿರುವ ಅವರು ಅರವಿಂದ್ ಕೇಜ್ರಿವಾಲ್ ಪಂಜಾಬ್‌ಗೆ ಉಚಿತ ವಿದ್ಯುತ್‌ ನೀಡುವ ಮಾತನಾಡುತ್ತಾರೆ. ಆದರೆ ಪಂಜಾಬ್‌ನ ಜೀವನಾಡಿಯಾದ ಉಷ್ಟ ವಿದ್ಯುತ್‌ ಸ್ಥಾವರವನ್ನು ಸ್ಥಗಿತಗೊಳಿಸಬೇಕೆಂದು ಬಯಸುತ್ತಾರೆ. ಎಂದು ಕೇಜ್ರಿವಾಲ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಆಮ್‌ ಆದ್ಮಿಗೆ ನವಜೋತ್‌ ಸಿಂಗ್ ಸಿಧು?; ಅನುಮಾನ ಮೂಡಿಸಿದ ಕೇಜ್ರಿವಾಲ್ ಹೇಳಿಕೆ

ಶಿರೋಮಣಿ ಅಕಾಲಿ ದಳದ ಪ್ರಕಾಶ್ ಸಿಂಗ್ ಬಾದಲ್ ವಿರುದ್ಧವೂ ಟ್ವೀಟ್ ಮಾಡಿರುವ  ಸಿಧು ಪ್ರಕಾಶ್ ಸಿಂಗ್‌ ಬಾದಲ್‌ ನೇತೃತ್ವದ ಹಿಂದಿನ ಸರ್ಕಾರ ದುಬಾರಿ ಬೆಲೆಗೆ ಸೌರವಿದ್ಯುತ್ ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ. ಆ ಮೂಲಕ ಜನರನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಎಲ್ಲಿಯೂ ಅವರು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ. ಕಳೆದ ಒಂದು ವಾರದ ಹಿಂದೆ ಲೋಡ್‌ ಶೆಡ್ಡಿಂಗ್ ವಿರೋಧಿಸಿ ತಮ್ಮದೇ ಸರ್ಕಾರದ ವಿರುದ್ಧ ನವಜೋತ್ ಸಿಂಗ್ ಆರೋಪಗಳನ್ನು ಮಾಡಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಪರೋಕ್ಷವಾಗಿ ದಾಳಿ ನಡೆಸಿಸದ್ದರು.

ಒಂದು ವಾರದ ಹಿಂದೆ ನವಜೋತ್‌ ಸಿಂಗ್ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಮಧಿಯವರನ್ನು ಭೇಟಿಯಾಗಿ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಕಾಂಗ್ರೆಸ್‌ ಹೈಕಮಾಂಡ್ ಮಧ್ಯಪ್ರವೇಶದಿಂದ ಕ್ಯಾಪ್ಟನ್ ಮತ್ತು ಸಿಧು ನಡುವಿನ ಅಸಮಾಧಾನದ ಕಿಡಿ ತಣ್ಣಗಾಗಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಹೈಕಮಾಂಡ್‌ ಸಿದು  ಅವರಿಗೆ ಮಹತ್ವದ ಸ್ಥಾನಮಾನ ನೀಡಲು ನಿರ್ಧರಿಸಿದ್ದು ಕ್ಯಾಪ್ಟನ್‌ ಕೂಡ ಇದಕ್ಕೆ ಒಪ್ಪಿದ್ದಾರೆ ಎನ್ನಲಾಗಿದೆ.

ಸಿದು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ಚರ್ಚೆಗಳಿಗೆ ಇಂದಿನ ಅವರ ಟ್ವೀಟ್ ತೆರೆ ಎಳೆದಿದೆ.

ಇದನ್ನೂ ಓದಿ:    ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...