Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

ಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

- Advertisement -
- Advertisement -

ಲೋಕಸಭಾ ಚುನಾವಣೆಯ ಘೋಷಣೆಗೆ ಕೇವಲ ಒಂದು ವಾರದ ಮೊದಲು ಚುನಾವಣಾ ಆಯುಕ್ತ (ಇಸಿ) ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ಅನೇಕರಿಗೆ ಆಶ್ಚರ್ಯವನ್ನುಂಟುಮಾಡಿದೆ, ಆದರೆ ಚುನಾವಣಾ ಆಯೋಗದ ಒಳಗಿನ ಮೂಲಗಳ ಪ್ರಕಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಅರುಣ್ ಗೋಯೆಲ್ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಮೂರನೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಚುನಾವಣೆ ಸಿದ್ದತೆಗಳ ಬಗ್ಗೆ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ಗೋಯೆಲ್ ನಿರಾಕರಿಸಿದ್ದರು. ನಂತರ ಮಾರ್ಚ್ 5ರಂದು ರಾಜೀವ್‌ ಕುಮಾರ್‌ ಏಕಾಂಗಿಯಾಗಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದರು. ಪತ್ರಿಕಾಗೋಷ್ಠಿಯಲ್ಲಿ, ಅನಾರೋಗ್ಯದ ಹಿನ್ನೆಲೆ ಅರುಣ್‌ ಗೋಯೆಲ್ ದೆಹಲಿಗೆ ತೆರಳಿದ್ದಾರೆ ಎಂದು CEC ರಾಜೀವ್ ಕುಮಾರ್ ಹೇಳಿದ್ದರು. ಆದರೆ, ಗೋಯೆಲ್ ಅವರ ನಿಕಟ ಮೂಲಗಳು ಅದನ್ನು ತಳ್ಳಿಹಾಕಿವೆ ಮತ್ತು ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದು, ಕೆಲವು ಗಂಭೀರ ಭಿನ್ನಾಭಿಪ್ರಾಯಗಳಿಂದಾಗಿ ಅವರು ಪಶ್ಚಿಮ ಬಂಗಾಳದ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ವಾಪಾಸ್ಸು ತೆರಳಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಮೂಲಗಳು ಇಬ್ಬರು ಅಧಿಕಾರಿಗಳ ನಡುವೆ ಏನಾಯಿತು ಮತ್ತು ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ನಿಖರವಾಗಿ ಅವರು ಯಾವ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಗೋಯೆಲ್ ಅವರು ನವೆಂಬರ್ 2027ರವರೆಗೆ ಅಧಿಕಾರಾವಧಿಯನ್ನು ಹೊಂದಿದ್ದರು ಮತ್ತು ಅವರು ಮುಂದಿನ ವರ್ಷ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಸಾಧ್ಯತೆ ಇತ್ತು.

ದೆಹಲಿಯಲ್ಲಿ ಅವರು ಮಾರ್ಚ್ 7ರಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಧಾನ ಕಚೇರಿಯಲ್ಲಿ ರಾಜೀವ್‌ ಕುಮಾರ್ ಅವರೊಂದಿಗೆ ಲೋಕಸಭೆ ಚುನಾವಣೆ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಿದ್ದರು. ಆದರೆ ಮಾರ್ಚ್ 8ರಂದು, ಅವರು ಚುನಾವಣಾ ಸಿದ್ಧತೆಗಳ ಕುರಿತು ಇಸಿಐ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಜೊತೆಗೆ ಸಭೆಗೆ ಹಾಜರಾಗಿಲ್ಲ, ಬದಲಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಿಸದೆ ಅವರು ತಮ್ಮ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಗೋಯಲ್‌ ಅವರಿಗೆ ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಸರ್ಕಾರ ಪ್ರಯತ್ನಿಸಿದೆ ಆದರೆ ಅವರು ತಮ್ಮ ನಿರ್ಧಾರದಲ್ಲಿ ಅಚಲವಾಗಿದ್ದರು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 9ರಂದು ಗೋಯಲ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಕಾನೂನು ಮತ್ತು ನ್ಯಾಯ ಸಚಿವಾಲಯವು ಅದೇ ದಿನದಿಂದ ಜಾರಿಗೆ ಬರುವಂತೆ ಗೋಯೆಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತ್ತು.

ಅರುಣ್ ಗೋಯಲ್ 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋಟ್‌ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನು ಓದಿ: ‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...