Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

ಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

- Advertisement -
- Advertisement -

ಲೋಕಸಭಾ ಚುನಾವಣೆಯ ಘೋಷಣೆಗೆ ಕೇವಲ ಒಂದು ವಾರದ ಮೊದಲು ಚುನಾವಣಾ ಆಯುಕ್ತ (ಇಸಿ) ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ಅನೇಕರಿಗೆ ಆಶ್ಚರ್ಯವನ್ನುಂಟುಮಾಡಿದೆ, ಆದರೆ ಚುನಾವಣಾ ಆಯೋಗದ ಒಳಗಿನ ಮೂಲಗಳ ಪ್ರಕಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಅರುಣ್ ಗೋಯೆಲ್ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಮೂರನೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಚುನಾವಣೆ ಸಿದ್ದತೆಗಳ ಬಗ್ಗೆ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ಗೋಯೆಲ್ ನಿರಾಕರಿಸಿದ್ದರು. ನಂತರ ಮಾರ್ಚ್ 5ರಂದು ರಾಜೀವ್‌ ಕುಮಾರ್‌ ಏಕಾಂಗಿಯಾಗಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದರು. ಪತ್ರಿಕಾಗೋಷ್ಠಿಯಲ್ಲಿ, ಅನಾರೋಗ್ಯದ ಹಿನ್ನೆಲೆ ಅರುಣ್‌ ಗೋಯೆಲ್ ದೆಹಲಿಗೆ ತೆರಳಿದ್ದಾರೆ ಎಂದು CEC ರಾಜೀವ್ ಕುಮಾರ್ ಹೇಳಿದ್ದರು. ಆದರೆ, ಗೋಯೆಲ್ ಅವರ ನಿಕಟ ಮೂಲಗಳು ಅದನ್ನು ತಳ್ಳಿಹಾಕಿವೆ ಮತ್ತು ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದು, ಕೆಲವು ಗಂಭೀರ ಭಿನ್ನಾಭಿಪ್ರಾಯಗಳಿಂದಾಗಿ ಅವರು ಪಶ್ಚಿಮ ಬಂಗಾಳದ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ವಾಪಾಸ್ಸು ತೆರಳಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಮೂಲಗಳು ಇಬ್ಬರು ಅಧಿಕಾರಿಗಳ ನಡುವೆ ಏನಾಯಿತು ಮತ್ತು ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ನಿಖರವಾಗಿ ಅವರು ಯಾವ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಗೋಯೆಲ್ ಅವರು ನವೆಂಬರ್ 2027ರವರೆಗೆ ಅಧಿಕಾರಾವಧಿಯನ್ನು ಹೊಂದಿದ್ದರು ಮತ್ತು ಅವರು ಮುಂದಿನ ವರ್ಷ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಸಾಧ್ಯತೆ ಇತ್ತು.

ದೆಹಲಿಯಲ್ಲಿ ಅವರು ಮಾರ್ಚ್ 7ರಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಧಾನ ಕಚೇರಿಯಲ್ಲಿ ರಾಜೀವ್‌ ಕುಮಾರ್ ಅವರೊಂದಿಗೆ ಲೋಕಸಭೆ ಚುನಾವಣೆ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಿದ್ದರು. ಆದರೆ ಮಾರ್ಚ್ 8ರಂದು, ಅವರು ಚುನಾವಣಾ ಸಿದ್ಧತೆಗಳ ಕುರಿತು ಇಸಿಐ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಜೊತೆಗೆ ಸಭೆಗೆ ಹಾಜರಾಗಿಲ್ಲ, ಬದಲಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಿಸದೆ ಅವರು ತಮ್ಮ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಗೋಯಲ್‌ ಅವರಿಗೆ ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಸರ್ಕಾರ ಪ್ರಯತ್ನಿಸಿದೆ ಆದರೆ ಅವರು ತಮ್ಮ ನಿರ್ಧಾರದಲ್ಲಿ ಅಚಲವಾಗಿದ್ದರು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 9ರಂದು ಗೋಯಲ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಕಾನೂನು ಮತ್ತು ನ್ಯಾಯ ಸಚಿವಾಲಯವು ಅದೇ ದಿನದಿಂದ ಜಾರಿಗೆ ಬರುವಂತೆ ಗೋಯೆಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತ್ತು.

ಅರುಣ್ ಗೋಯಲ್ 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋಟ್‌ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನು ಓದಿ: ‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...