Homeಮುಖಪುಟಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

ಮುಖ್ಯ ಚುನಾವಣಾ ಆಯುಕ್ತರ ನಡುವಿನ ಭಿನ್ನಾಭಿಪ್ರಾಯದಿಂದಲೇ ಅರುಣ್ ಗೋಯೆಲ್ ರಾಜೀನಾಮೆ?

- Advertisement -
- Advertisement -

ಲೋಕಸಭಾ ಚುನಾವಣೆಯ ಘೋಷಣೆಗೆ ಕೇವಲ ಒಂದು ವಾರದ ಮೊದಲು ಚುನಾವಣಾ ಆಯುಕ್ತ (ಇಸಿ) ಅರುಣ್ ಗೋಯೆಲ್ ಅವರ ಹಠಾತ್ ರಾಜೀನಾಮೆ ಅನೇಕರಿಗೆ ಆಶ್ಚರ್ಯವನ್ನುಂಟುಮಾಡಿದೆ, ಆದರೆ ಚುನಾವಣಾ ಆಯೋಗದ ಒಳಗಿನ ಮೂಲಗಳ ಪ್ರಕಾರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಅರುಣ್ ಗೋಯೆಲ್ ಅವರ ನಡುವಿನ ಭಿನ್ನಾಭಿಪ್ರಾಯಗಳಿಂದ ಈ ಬೆಳವಣಿಗೆ ನಡೆದಿದೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ, ಉತ್ತರಪ್ರದೇಶ ಮತ್ತು ಮಹಾರಾಷ್ಟ್ರದ ನಂತರ ಮೂರನೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿರುವ ಪಶ್ಚಿಮ ಬಂಗಾಳದ ಚುನಾವಣೆ ಸಿದ್ದತೆಗಳ ಬಗ್ಗೆ ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲು ಗೋಯೆಲ್ ನಿರಾಕರಿಸಿದ್ದರು. ನಂತರ ಮಾರ್ಚ್ 5ರಂದು ರಾಜೀವ್‌ ಕುಮಾರ್‌ ಏಕಾಂಗಿಯಾಗಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ್ದರು. ಪತ್ರಿಕಾಗೋಷ್ಠಿಯಲ್ಲಿ, ಅನಾರೋಗ್ಯದ ಹಿನ್ನೆಲೆ ಅರುಣ್‌ ಗೋಯೆಲ್ ದೆಹಲಿಗೆ ತೆರಳಿದ್ದಾರೆ ಎಂದು CEC ರಾಜೀವ್ ಕುಮಾರ್ ಹೇಳಿದ್ದರು. ಆದರೆ, ಗೋಯೆಲ್ ಅವರ ನಿಕಟ ಮೂಲಗಳು ಅದನ್ನು ತಳ್ಳಿಹಾಕಿವೆ ಮತ್ತು ಅವರು ಪರಿಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದು, ಕೆಲವು ಗಂಭೀರ ಭಿನ್ನಾಭಿಪ್ರಾಯಗಳಿಂದಾಗಿ ಅವರು ಪಶ್ಚಿಮ ಬಂಗಾಳದ ಭೇಟಿಯನ್ನು ಮೊಟಕುಗೊಳಿಸಿ ದೆಹಲಿಗೆ ವಾಪಾಸ್ಸು ತೆರಳಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಮೂಲಗಳು ಇಬ್ಬರು ಅಧಿಕಾರಿಗಳ ನಡುವೆ ಏನಾಯಿತು ಮತ್ತು ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ನಿಖರವಾಗಿ ಅವರು ಯಾವ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂಬುದರ ಕುರಿತು ಹೆಚ್ಚಿನ ವಿವರಗಳನ್ನು ನೀಡಿಲ್ಲ. ಗೋಯೆಲ್ ಅವರು ನವೆಂಬರ್ 2027ರವರೆಗೆ ಅಧಿಕಾರಾವಧಿಯನ್ನು ಹೊಂದಿದ್ದರು ಮತ್ತು ಅವರು ಮುಂದಿನ ವರ್ಷ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಸಾಧ್ಯತೆ ಇತ್ತು.

ದೆಹಲಿಯಲ್ಲಿ ಅವರು ಮಾರ್ಚ್ 7ರಂದು ಭಾರತೀಯ ಚುನಾವಣಾ ಆಯೋಗದ (ಇಸಿಐ) ಪ್ರಧಾನ ಕಚೇರಿಯಲ್ಲಿ ರಾಜೀವ್‌ ಕುಮಾರ್ ಅವರೊಂದಿಗೆ ಲೋಕಸಭೆ ಚುನಾವಣೆ ಸಂಬಂಧಿತ ಸಭೆಗಳಲ್ಲಿ ಭಾಗವಹಿಸಿದ್ದರು. ಆದರೆ ಮಾರ್ಚ್ 8ರಂದು, ಅವರು ಚುನಾವಣಾ ಸಿದ್ಧತೆಗಳ ಕುರಿತು ಇಸಿಐ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಜೊತೆಗೆ ಸಭೆಗೆ ಹಾಜರಾಗಿಲ್ಲ, ಬದಲಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ತಿಳಿಸದೆ ಅವರು ತಮ್ಮ ರಾಜೀನಾಮೆಯನ್ನು ಭಾರತದ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಗೋಯಲ್‌ ಅವರಿಗೆ ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಸರ್ಕಾರ ಪ್ರಯತ್ನಿಸಿದೆ ಆದರೆ ಅವರು ತಮ್ಮ ನಿರ್ಧಾರದಲ್ಲಿ ಅಚಲವಾಗಿದ್ದರು ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಾರ್ಚ್ 9ರಂದು ಗೋಯಲ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, ಕಾನೂನು ಮತ್ತು ನ್ಯಾಯ ಸಚಿವಾಲಯವು ಅದೇ ದಿನದಿಂದ ಜಾರಿಗೆ ಬರುವಂತೆ ಗೋಯೆಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದೆ ಎಂದು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿತ್ತು.

ಅರುಣ್ ಗೋಯಲ್ 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ನವೆಂಬರ್ 18, 2022ರಂದು ಸ್ವಯಂ ನಿವೃತ್ತಿ ಪಡೆದು, ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿತ್ತು. ಸುಪ್ರೀಂಕೋಟ್‌ನಲ್ಲಿ ಈ ಕುರಿತು ಪ್ರಶ್ನಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಸ್ವಯಂ ನಿವೃತ್ತಿ ಪಡೆದ ಅರುಣ್ ಗೋಯಲ್ ಅವರನ್ನು ತಕ್ಷಣವೇ ಚುನಾವಣಾ ಆಯುಕ್ತ ಹುದ್ದೆಗೆ ನೇಮಿಸುವ ಆತುರವೇನಿತ್ತು? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ಗೋಯೆಲ್ ಅವರ ನೇಮಕಾತಿಯ ವಿರುದ್ಧ ಏಪ್ರಿಲ್ 2023ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ಚುನಾವಣಾ ಆಯೋಗಗಳ ನೇಮಕಾತಿ ವಿಷಯದ ಕುರಿತು ಸಂವಿಧಾನಿಕ ಪೀಠವು ತೀರ್ಪು ನೀಡಿದ್ದರಿಂದ ಸುಪ್ರೀಂ ಕೋರ್ಟ್ 2023 ಆಗಸ್ಟ್‌ನಲ್ಲಿ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು.

ಡಿಸೆಂಬರ್ 7, 1962ರಂದು ಪಂಜಾಬ್‌ನ ಪಟಿಯಾಲದಲ್ಲಿ ಜನಿಸಿದ್ದ ಅರುಣ್ ಗೋಯೆಲ್, ಗಣಿತಶಾಸ್ತ್ರದಲ್ಲಿ M.Sc. ಪದವಿಯನ್ನು ಕುಲಪತಿಗಳ ಪದಕದೊಂದಿಗೆ ಪಡೆದಿದ್ದರು. ಅವರು ಇಂಗ್ಲೆಂಡ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಚರ್ಚಿಲ್ ಕಾಲೇಜಿನಿಂದ ಅಭಿವೃದ್ಧಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಅವರು ಅಮೇರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದ ಜಾನ್ ಎಫ್ ಕೆನಡಿ ಸರ್ಕಾರಿ ಶಾಲೆಯಲ್ಲಿ ತರಬೇತಿ ಪಡೆದಿದ್ದಾರೆ. ಆ ಬಳಿಕ ಪಂಜಾಬ್ ಕೇಡರ್‌ನ 1985-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದರು. ಅರುಣ್ ಗೋಯೆಲ್ ಅವರು 37 ವರ್ಷಗಳ ಸೇವೆಯ ನಂತರ ಭಾರತ ಸರ್ಕಾರದ  ಕೈಗಾರಿಕೆ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರು ನವೆಂಬರ್ 2022ರಲ್ಲಿ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಇದನ್ನು ಓದಿ: ‘ಪ್ರಧಾನಿ ಕಾರ್ಯಾಲಯಕ್ಕೆ ಮಮತಾ ಬ್ಯಾನರ್ಜಿ ಸಂದೇಶ ಕಳುಹಿಸಿದ್ದಾರೆ..’; ಟಿಎಂಸಿ ಪಟ್ಟಿ ಬಿಡುಗಡೆಗೆ ಅಧೀರ್ ಲೇವಡಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...