Homeಚಳವಳಿದೆಹಲಿ ಹೋರಾಟದ ಕಣಗಳಿಗೆ ಹರಿದು ಬಂದ ರೈತ ಪ್ರತಿಭಟನಾಕಾರರ ದಂಡು

ದೆಹಲಿ ಹೋರಾಟದ ಕಣಗಳಿಗೆ ಹರಿದು ಬಂದ ರೈತ ಪ್ರತಿಭಟನಾಕಾರರ ದಂಡು

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಭಾ, ಕ್ರಾಂತಿಕಾರಿ ಕಿಸಾನ್ ಯೂನಿಯನ್, ಜಮ್ಹೂರಿ ಕಿಸಾನ್ ಸಭಾ ಮತ್ತು ಬಿಕೆಯು ಕಡಿಯನ್‌ ಸೇರಿದಂತೆ ವಿವಿಧ ರೈತ ಸಂಘಗಳ ಹಲವಾರು ದೊಡ್ಡ ದೊಡ್ಡ ಗುಂಪುಗಳು ಬುಧವಾರ ಪಂಜಾಬಿನಿಂದ ಬಂದು ದೆಹಲಿಯ ಪ್ರತಿಭಟನಾ ನಿರತ ಗಡಿಗಳಿಗೆ ಬಂದು ಸೇರಿಕೊಂಡಿದ್ದಾರೆ.

ಮಂಗಳವಾರ ಉದಮಸಿಂಗ್ ನಗರ ಮತ್ತು ಉತ್ತರಾಖಂಡದ ಇತರ ಪ್ರದೇಶಗಳಿಂದ ಘಾಜಿಪುರ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಬಂದಿದ್ದಾರೆ. ಕಿಸಾನ್ ಸಂಘರ್ಷ ಸಮಿತಿ ಹರಿಯಾಣದ ಗುಂಪಿನ ನೂರಾರು ಸದಸ್ಯರು ನಿನ್ನೆ ಪ್ರತಿಭಟನಾಕಾರರ ಜೊತೆಗೆ ಬಂದು ಸೇರಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಲಕ್ಷಾಂತರ ರೈತರು ಗಡಿಗಳಲ್ಲಿ ತಿಂಗಳುಗಟ್ಟಲೆ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದ “ಎಂಎಸ್‌ಪಿ ಜುಮ್ಲಾ” ಮುಂದುವರಿಯುತ್ತಿದೆ ಎಂದಿರುವ ಎಸ್‌ಕೆಎಂ ಸರ್ಕಾರದ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸರ್ಕಾರ ಸೂಚನೆ: ರೈತ ಹೋರಾಟ ಬೆಂಬಲಿಸಿದ ನಾಲ್ಕು ಟ್ವಿಟರ್‌ ಖಾತೆಗಳಿಗೆ ನಿರ್ಬಂಧ

ಇಂದು (ಜೂನ್ 9) ಪ್ರತಿಭಟನಾ ಸ್ಥಳಗಳಲ್ಲಿ ಸಿಖ್ ವಾರಿಯರ್ ಬಂಡಾ ಸಿಂಗ್ ಬಹದ್ದೂರ್ ಮತ್ತು ಬುಡಕಟ್ಟು ಮುಖಂಡ, ಹುತಾತ್ಮ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಲಾಯಿತು. ಹದಿನೆಂಟನೇ ಶತಮಾನದ ಆರಂಭದಲ್ಲಿ, ಮೊಘಲರು ದೇಶವನ್ನು ವಶಪಡಿಸಿಕೊಳ್ಳುವ ಮೊದಲು, ಜಮೀನ್ದಾರಿ ವ್ಯವಸ್ಥೆಯನ್ನು ರದ್ದುಗೊಳಿಸಲು ಮತ್ತು ಭೂಮಿಯನ್ನು ಉಳುಮೆ ಮಾಡುವವರಿಗೆ ಆಸ್ತಿ ಹಕ್ಕುಗಳನ್ನು ನೀಡುವಲ್ಲಿ ಬಂಡಾ ಸಿಂಗ್ ಬಹದ್ದೂರ್ ಹೆಸರುವಾಸಿಯಾಗಿದ್ದಾರೆ. ಇವರು 1716 ರ ಜೂನ್ 9 ರಂದು ಹುತಾತ್ಮರಾಗಿದ್ದಾರೆ ಎಂದು ಎಸ್‌ಕೆಎಂ ತಿಳಿಸಿದೆ.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರನ್ನು ಆದಿವಾಸಿಗಳು ಮತ್ತು ಹಲವು ಮಂದಿ ಪೂಜಿಸುತ್ತಾರೆ. ಭಾರತದ ಕಾಡುಗಳು ಮತ್ತು ಭೂಮಿಯ ಮೇಲಿನ ಆದಿವಾಸಿ ಹಕ್ಕುಗಳನ್ನು ರಕ್ಷಿಸಲು ಬ್ರಿಟಿಷ್ ಆಡಳಿತಗಾರರ ವಿರುದ್ಧ ಹೋರಾಟ ನಡೆಸಿ ಅವರ ಹಕ್ಕುಗಳನ್ನು ರಕ್ಷಿಸಿದ್ದಾರೆ. ಜೊತೆಗೆ ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆಗಳಿಗಾಗಿ ಗೌರವಿಸಲ್ಪಟ್ಟಿದ್ದಾರೆ. ಕೇವಲ ತಮ್ಮ 25 ವರ್ಷ ವಯಸ್ಸಿನಲ್ಲೇ ಜೂನ್ 9, 1900 ರಂದು ಬ್ರಿಟಿಷ್ ಜೈಲಿನಲ್ಲಿ ಬಿರ್ಸಾ ಮುಂಡಾ ಹುತಾತ್ಮರಾಗಿದ್ದಾರೆ.

ಪ್ರತಿಭಟನಾಕಾರರು ಈ ಇಬ್ಬರು ಹುತಾತ್ಮರ ಜೀವನ ಕಥೆಗಳು ಮತ್ತು ಹೋರಾಟಗಳಿಂದ ಸ್ಫೂರ್ತಿ ಪಡೆದು, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಪ್ರಸ್ತುತ ಹೋರಾಟವನ್ನು ಮುಂದುವರೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....