Homeಎಂಟರ್ತೈನ್ಮೆಂಟ್ಮಂಡ್ಯದಲ್ಲೊಂದು ವಿಶಿಷ್ಠ ಸಿನಿಮಾ ಹಬ್ಬ

ಮಂಡ್ಯದಲ್ಲೊಂದು ವಿಶಿಷ್ಠ ಸಿನಿಮಾ ಹಬ್ಬ

- Advertisement -
- Advertisement -

ಸಿನಿಮಾ ಎಂದಾಕ್ಷಣ ಎಲ್ಲರಲ್ಲೂ ಆಸಕ್ತಿ ಇದ್ದೇ ಇರುತ್ತದೆ. ಸಿನಿಮಾ ಬಗ್ಗೆ ತಿಳಿದುಕೊಳ್ಳುವ, ವಿಮರ್ಶಿಸುವ, ಚರ್ಚಿಸುವ ಸಿನಿಮಾಸಕ್ತರಿಗೆ ‘ಮನುಜಮತ ಸಿನಿಯಾನ’ ತಂಡ ನಡೆಸಿಕೊಡುವ ಸಿನಿಮಾ ಪ್ರದರ್ಶನದ ಸಿನಿಹಬ್ಬಗಳು ವಿಶಿಷ್ಟ ಪ್ರಯೋಗಗಳಿಗೆ ಹಿಡಿದ ಕನ್ನಡಿಯಂತಿವೆ. ಈ ತಂಡದಲ್ಲಿ ವಿಶ್ವದ ಸಿನಿಮಾಗಳ ಬಗ್ಗೆ ವಿಭಿನ್ನವಾಗಿ ಚಿಂತಿಸುವ ಹಲವು ಮುಖಗಳು ಸಕ್ರಿಯವಾಗಿ ತೊಡಗಿಸಿಕೊಂಡು, ಸದಾಕಾಲ ಸಿನಿಪ್ರೇಮಿಗಳಿಗೆ ಚಲನಚಿತ್ರ ರಸಗ್ರಹಣದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಡುವ ಸಫಲ ಪ್ರಯತ್ನಗಳನ್ನು ಮಾಡಿಕೊಂಡು ಬಂದಿದ್ದಾರೆ.

ಸಿನಿಮಾದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹೊಂದಿರುವ ಫಣಿರಾಜ್‍ರಂತಹ ಸಿನಿ ಮೇಧಾವಿಗಳು ತಮ್ಮ ಸಿನಿಮಾ ಜ್ಞಾನವನ್ನು ಹಲವರಿಗೆ ಧಾರೆ ಎರೆಯುತ್ತಾ, ಈ ತಂಡವನ್ನು ಮುನ್ನೆಲೆಗೆ ತಂದಿರುವುದು ಸಂತಸದ ಸಂಗತಿ. ಬರೀ ಮಾಸ್, ಕ್ಲಾಸ್, ಹೊಡೆದಾಟ, ಕಾಮಿಡಿ ಡೈಲಾಗ್‍ಗಳ ಸಿನಿಮಾಗಳಿಗೆ ಮೀಸಲಾದ ಹಲವು ಯುವ ಮನಸ್ಸುಗಳಿಗೆ ಪ್ರಾಪಂಚಿಕ ಸಿನಿಮಾಗಳ ಕಡೆ ಒಲವು ಮೂಡಿಸಿದ ಕೀರ್ತಿ ತಂಡದ ಎಲ್ಲಾ ಸಂಘಟಕರಿಗೂ ಸಲ್ಲುತ್ತದೆ. ಅದರಲ್ಲೂ ಯದುನಂದನ್, ರೋಹಿತ್ ಅಗಸರಹಳ್ಳಿ, ಕುಮಾರ್ ರೈತ, ಮನು ಮೈಸೂರು, ಐವನ್ ಡಿ ಸಿಲ್ವ, ಹರ್ಷ ಕುಮಾರ್ ಕುಗ್ವೆ, ಜಿ.ಟಿ ಸತೀಶ್ ಹಾಗೂ ಹೊನ್ನಾಳಿ ಚಂದ್ರಶೇಖರ್ ಸೇರಿದಂತೆ ಹಲವು ಘಟಾನುಘಟಿ ಸಿನಿ ಸಂಘಟಕರು ಈ ಕೆಲಸಕ್ಕೆ ಕೈಹಾಕಿರುವುದು ಸಿನಿಹಬ್ಬಗಳ ವೈಭವವನ್ನು ಮತ್ತಷ್ಟು ಹೆಚ್ಚಿಸಿದೆ.

ಗಂಡು-ಹೆಣ್ಣು, ಜಾತಿ-ಮತ, ಪ್ರಾಂತ್ಯಗಳ ಭೇದವಿಲ್ಲದೇ ಒಂದೇ ಸ್ಥಳದಲ್ಲಿ ಒಟ್ಟಾಗಿ ಕುಳಿತು ಸಿನಿಮಾಗಳನ್ನು ನೋಡಿ, ಆ ಸಿನಿಮಾದ ಹಲವು ಆಯಾಮಗಳನ್ನು ಚರ್ಚಿಸಿ, ವಿಮರ್ಶಿಸುವ, ಸಿನಿಮಾಗಳ ಬಗ್ಗೆ ಸಲಹೆ, ಮಾಹಿತಿ ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ನಡೆಯುವ ಇಂತಹ ಸಿನಿಹಬ್ಬಗಳ ಪ್ರಯತ್ನ ನಿಜಕ್ಕೂ ಸಾರ್ಥಕ. ಇದಲ್ಲದೇ ಮನುಜಮತ ಸಿನಿಯಾನ ವಾಟ್ಸಾಪ್ ಗ್ರೂಪಿನಲ್ಲಿ ಹಲವು ಸಿನಿಮಾಗಳ ಬಗ್ಗೆ ಚರ್ಚೆಯಾಗುತ್ತವೆ. ಉತ್ತಮ ಮಾಹಿತಿಗಳು ಪರಸ್ಪರ ಹಂಚಿಕೆಯಾಗುತ್ತಿವೆ.

ಗ್ಲೋರಿ ಸಿನಿಮಾದ ದೃಶ್ಯ

ಸಿನಿಹಬ್ಬಕ್ಕೆ ಸಂಬಂಧಿಸಿದಂತೆ ಮೊದಲು ಸಿನಿಹಬ್ಬ ನಡೆಸುವ ಸ್ಥಳ ನಿಗದಿಯಾಗಿ, ದಿನ ಗೊತ್ತು ಮಾಡಿ, ಥೀಮ್ ಆಯ್ಕೆ ಮಾಡಿ, ಆ ಥೀಮ್‍ಗೆ ಸಂಬಂಧಿಸಿದ ಸಿನಿಮಾಗಳನ್ನು ಹೆಕ್ಕಿ ತೆಗೆದು, ಆ ಸಿನಿಮಾಗಳನ್ನು ವೀಕ್ಷಿಸಿ ಅತ್ಯುತ್ತಮವಾದ ಸಾಕ್ಷ್ಯಚಿತ್ರ, ಕಿರುಚಿತ್ರ ಸೇರಿದಂತೆ ಸುಮಾರು 7-8 ಸಿನಿಮಾಗಳನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿ, ಸಿನಿಹಬ್ಬದಂದು ಪ್ರದರ್ಶಿಸಲಾಗುತ್ತದೆ. ಸಿನಿಹಬ್ಬದ ಮತ್ತೊಂದು ವಿಶೇಷವೆಂದರೆ ಊಟದ ಮೆನು. ಯಾವ ಯಾವ ಭಾಗದಲ್ಲಿ ಸಿನಿಹಬ್ಬ ಜರುಗುತ್ತದೆಯೋ ಆ ಭಾಗದಲ್ಲಿ ವಿಶೇಷ ತಿನಿಸುಗಳನ್ನು ಉಣಬಡಿಸುವುದು ವಿಶೇಷ. ಸಿನಿಮಾಗಳ ಹೂರಣ ಹಾಗೂ ನಿಸರ್ಗದ ಕಡೆ ಚಾರಣ – ಇದು ಸಿನಿಹಬ್ಬದ ಪ್ಲಸ್ ಪಾಯಿಂಟ್.

ಇದನ್ನು ಓದಿ: ಮನುಜಮತ ಸಿನೆಮಾ ಹಬ್ಬ : ಹೊಸ ಕಾಲದ ಸಮುದಾಯ ಕಟ್ಟುವ ನಡೆ

ಮಂಡ್ಯ ಸಿನಿಮಾ ಹಬ್ಬ

ಈ ಬಾರಿ ಮನುಜಮತ ಸಿನಿಯಾದ ಸಂಘಟಕರು ಮಂಡ್ಯದಲ್ಲಿ ಸಿನಿಹಬ್ಬವನ್ನು ಆಯೋಜಿಸಿದ್ದರು. ಯಾವುದೇ ಕೊರತೆಗಳು ನುಸುಳದಂತೆ ಅಚ್ಚುಕಟ್ಟಾಗಿ ನಿಭಾಯಿಸಿದ ಸಿನಿಹಬ್ಬದ ಸಂಘಟಕರು ಅಭಿನಂದನಾರ್ಹರು. ಇಲ್ಲಿ ‘ಮಾಧ್ಯಮ ರಾಜಕಾರಣ’ ಎಂಬ ಥೀಮ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಅನುಸರಿಸುತ್ತಿರುವ ಧೋರಣೆಗಳು ಹಾಗೂ ಕೆಲವು ಮಾಧ್ಯಮಗಳ ಕರಾಳ ಮುಖವನ್ನು ತೆರೆದಿಡಲು ಪ್ರಯತ್ನಿಸಿತು. ಮಾಧ್ಯಮಗಳು ತಮ್ಮ ಟಿ.ಆರ್.ಪಿ ಎಂಬ ವ್ಯಾವಹಾರಿಕ ಪ್ರಜ್ಞೆಯಿಂದ ಸಾಮಾಜಿಕ ಪ್ರಜ್ಞೆಯನ್ನು ಮರೆತಿದ್ದಾರೆ. ಮಾಧ್ಯಮಗಳ ಕೆಲವು ಸುಳ್ಳು ಸುದ್ದಿಗಳ ಪ್ರಸಾರದಿಂದ ನಿಜ ಯಾವುದು? ಸುಳ್ಳು ಯಾವುದು? ಎಂಬ ಗೊಂದಲ ಮೂಡುವುದಂತೂ ಸತ್ಯ. ಇದು ಹುಲಿ ಬಂತು ಹುಲಿ ಕಥೆಯ ಹಾಗೇ ಜನರಲ್ಲಿ ಗೊಂದಲ ಸೃಷ್ಟಿಸುತ್ತದೆ.

ಎರಡು ದಿನಗಳ ಕಾಲ ನಡೆದ ಮಂಡ್ಯ ಸಿನಿಹಬ್ಬದಲ್ಲಿ ಮೊದಲಿಗೆ ಫಾಲನ್ ಆರ್ಟ್ ಎಂಬ ಕಿರುಚಿತ್ರದೊಂದಿಗೆ ಪ್ರಾರಂಭವಾಗಿ ಸ್ಪಾಟ್‍ಲೈಟ್, ಪೀಪ್ಲಿಲೈವ್, ದಿ ರೆವಲ್ಯೂಷನ್ ವಿಲ್ ನಾಟ್ ಬಿ ಟೆಲಿವೈಸ್ಡ್, ಈಡಿ ಟಿವಿ ಹಾಗೂ ಗ್ಲೋರಿ ಚಲನಚಿತ್ರ ಪ್ರದರ್ಶನಗಳೊಂದಿಗೆ ಸಿನಿಹಬ್ಬ ಮುಕ್ತಾಯಗೊಂಡಿತು.

ಪೋಲ್ಯಾಂಡಿನ ‘ಫಾಲನ್ ಆರ್ಟ್’ ಕಿರುಚಿತ್ರವು ಪೋಲ್ಯಾಂಡಿನ ರಾಜಕೀಯ ವ್ಯವಸ್ಥೆಯನ್ನು ಹಾಗೂ ಅಲ್ಲಿನ ಮಾಧ್ಯಮಗಳ ಕಠೋರತೆಯನ್ನು ತಿಳಿಸುತ್ತದೆ. 2015ರಲ್ಲಿ ತೆರೆಕಂಡ ಹಾಲಿವುಡ್‍ನ ‘ಸ್ಪಾಟ್‍ಲೈಟ್’ ಚಿತ್ರವು ಪತ್ರಿಕೆಯಲ್ಲಿ ಪ್ರಕಟವಾದ ಸತ್ಯಘಟನೆಯನ್ನು ಆಧರಿಸಿದೆ. ಬೋಸ್ಟನ್ ನಗರದ ಚರ್ಚ್‍ಗಳಲ್ಲಿ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯವನ್ನು ಹೊರಗೆಳೆಯುವ ಸಂದರ್ಭದಲ್ಲಿ ಪತ್ರಕರ್ತರು ಅನುಭವಿಸಿದ ನೋವು-ಅವಮಾನಗಳನ್ನು ಚಿತ್ರವು ತೆರೆದಿಡುತ್ತದೆ.

2010ರಲ್ಲಿ ಭಾರತದಲ್ಲಿ ತೆರೆಕಂಡ ಅನುಷ್ಕ ರಿಜ್ವಿ ನಿರ್ದೇಶನದ ‘ಪೀಪ್ಲಿ ಲೈವ್’ ಚಿತ್ರವು ಒಬ್ಬ ಸಾಮಾನ್ಯ ಬಡರೈತನ ಬದುಕನ್ನು ಮಾಧ್ಯಮಗಳು ಹೇಗೆ ಬಿಂಬಿಸುತ್ತವೆ ಎಂಬುದನ್ನು ತೋರಿಸುತ್ತದೆ. ಭೂಮಿ ಕಳೆದುಕೊಂಡು ಸಾಲ ತೀರಿಸಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿ, ಸರ್ಕಾರದಿಂದ ತನ್ನ ಕುಟುಂಬಕ್ಕೆ ಪರಿಹಾರಧನ ಕೊಡಿಸಲು ಹೆಣಗಾಡುವ ನಾಥೂದಾಸ್ ಎಂಬ ಬಡರೈತ ಒಂದು ಕಡೆ, ಅದನ್ನೇ ದುರುಪಯೋಗ ಪಡಿಸಿಕೊಂಡು ರೈತನ ಆತ್ಮಹತ್ಯೆಯನ್ನು ಲೈವ್ ಆಗಿ ತೋರಿಸುವ ಪ್ರಯತ್ನಿಸುವ ಮಾಧ್ಯಮಗಳ ಕೆಟ್ಟ ಮನಸ್ಥಿತಿಯನ್ನು ಈ ಚಿತ್ರವು ಬಿಚ್ಚಿಡುತ್ತದೆ.

2003ರಲ್ಲಿ ತಯಾರಾದ ‘The Revolution will not be televisied’ ಎಂಬ ಸಾಕ್ಷ್ಯಾಚಿತ್ರವು ವೆನಿಜುವೆಲಾದ ಅಧ್ಯಕ್ಷ ಹ್ಯುಗೋ ಚಾವೆಝ್‍ರ ಪರ, ವಿರೋಧಗಳ ಜನತೆ ನಡೆಸಿದ ಪ್ರತಿಭಟನೆಯನ್ನು ತೆರೆದಿಡುತ್ತದೆ. ಮಿಲಿಟರಿ ಮತ್ತು ನಿರಂಕುಶ ಆಡಳಿತದ ತಾರ್ಕಿಕ ಸಂಘರ್ಷಗಳ ಬಗ್ಗೆ ಹಾಗೂ ಅಲ್ಲಿನ ಜನರಿಗೆ ಚಾವೆಝ್ ಮೇಲಿದ್ದ ಅಭಿಮಾನವನ್ನು ಚಿತ್ರವು ಸಾರಿ ಹೇಳುತ್ತದೆ. ನೈಜವಾಗಿ ಚಿತ್ರೀಕರಿಸಿರುವ ಈ ಸಾಕ್ಷ್ಯಾಚಿತ್ರವು ತುಂಬಾ ಅದ್ಭುತವಾಗಿ ಮೂಡಿಬಂದಿದೆ.

1999ರಲ್ಲಿ ತೆರೆಕಂಡ ಹಾಲಿವುಡ್‍ನ ‘ಈಡಿ ಟಿವಿ’ ಚಿತ್ರದಲ್ಲಿ ಮಾಧ್ಯಮಗಳ ಮತ್ತೊಂದು ಮುಖವನ್ನು ಅನಾವರಣ ಮಾಡಲಾಗಿದೆ. ಭಾರತದಲ್ಲಿ ಪ್ರಸ್ತುತವಾಗಿ ರಿಯಾಲಿಟಿ ಷೋಗಳದ್ದೇ ಕಾರುಬಾರು. ಈ ರಿಯಾಲಿಟಿ ಷೋಗಳಿಂದ ವ್ಯಕ್ತಿಗಳ ವೈಯಕ್ತಿಕ ಬದುಕು ಹರಣವಾಗುತ್ತಿದೆ ಎಂಬುದನ್ನು ಈ ಚಿತ್ರವು ತಿಳಿಸುತ್ತದೆ. ಕೆಲವು ವರ್ಷಗಳ ಹಿಂದೆ ನಡೆದ ಸಿದ್ದಿ ಜನಾಂಗದ ಆದಿವಾಸಿ ಹುಡುಗ ರಾಜೇಶ್‍ನ ದುರಂತ ಅಂತ್ಯವನ್ನು ಈ ಚಿತ್ರವು ನೆನಪಿಸುತ್ತದೆ. ಪ್ರೇಕ್ಷಕರ ಮನೋರಂಜನಾ ದೌರ್ಬಲ್ಯವನ್ನು ದುರುಪಯೋಗಪಡಿಸಿಕೊಂಡು ಟಿ.ಆರ್.ಪಿ ತೆವಲಿಗಾಗಿ ಮಾಧ್ಯಮಗಳು ಏನೇನೆಲ್ಲಾ ಪ್ರಸಾರ ಮಾಡುತ್ತವೆ ಎಂಬುದನ್ನು ತಿಳಿಸುತ್ತದೆ.

ಇನ್ನೂ 2016ರಲ್ಲಿ ತೆರೆಕಂಡ ಬಲ್ಗೇರಿಯಾದ ‘ಗ್ಲೋರಿ’ ಚಿತ್ರವು ಒಬ್ಬ ಸಾಮಾನ್ಯ ರೈಲ್ವೆ ಕಾರ್ಮಿಕನ ಮುಗ್ಧತೆ, ಪ್ರಾಮಾಣಿಕತೆಯನ್ನು ಹೇಗೆ ಸಮಾಜ ದುರುಪಯೋಗಪಡಿಸಿಕೊಳ್ಳುತ್ತದೆ ಎಂಬುದನ್ನು ತಿಳಿಸುತ್ತದೆ. ಪೆಟ್ರೋವ್ ಅನುಭವಿಸುವ ನೋವು-ಯಾತನೆ, ಅವನಿಗಿರುವ ಮುಗ್ಧತೆ, ಪ್ರಾಮಾಣಿಕತೆ, ಸಮಯಪ್ರಜ್ಞೆ, ಪ್ರಾಣಿಪ್ರಜ್ಞೆಯನ್ನು ಈ ಚಿತ್ರದಲ್ಲಿ ಅದ್ಭುತವಾಗಿ ಸೆರೆಹಿಡಿಯಲಾಗಿದೆ. ಸಾರಿಗೆ ಮಂತ್ರಿಯ ಭ್ರಷ್ಟಾಚಾರವನ್ನು ಹೊರಗೆಳೆಯಲು ಹೋಗಿ ಸಂಕಷ್ಟಕ್ಕೆ ಸಿಲುಕಿಕೊಳ್ಳುವ, ಕಳೆದುಕೊಂಡ ವಾಚನ್ನು ಹುಡುಕಲು ಕಷ್ಟ ಪಡುವ ಪೆಟ್ರೋವ್‍ನ ಚಿತ್ರಣ ಈ ಚಿತ್ರದಲ್ಲಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಮಾಧ್ಯಮಗಳು ಸಕಾರಾತ್ಮಕ ಸಂಗತಿಗಳಿಗಿಂತ ನಕಾರಾತ್ಮಕ ಅಂಶಗಳನ್ನೇ ಹೆಚ್ಚು ಪ್ರಸಾರ ಮಾಡುತ್ತಿರುವುದು ದುರಂತದ ಸಂಗತಿ. ಈ ಬಗ್ಗೆ ಜನ ಸಮುದಾಯ ಜಾಗೃತ ಆಗಬೇಕೆಂದು ಈ ಥೀಮ್‍ನ ಆಶಯವಾಗಿದೆ.

ನಿಮ್ಮ ಓದಿಗಾಗಿ ಮತ್ತಷ್ಟು

ಪಾಲ್ ಥಾಮಸ್ ಆಂಡರ್ಸನ್ – ಸಿನಿಯಾನದಲ್ಲಿ ರಾಜಶೇಖರ್ ಅಕ್ಕಿಯವರ ಬರಹ

ಏನಿದು ಫಿಲ್ಮ್ ಡೈರೆಕ್ಷನ್?

ಇದು ನಮ್ಮ ಚಿಂತನಾ ವಲಯದ ಸೋಲೂ ಹೌದು – ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...