Homeಮುಖಪುಟಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಪ್ರಧಾನಿ ಮೋದಿ ಹಲವು ಬಾರಿ ತಮ್ಮ ವೇಷಭೂಷಣಗಳಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ತಮ್ಮ ಭಾಷಾ ವೈವಿದ್ಯತೆಯಿಂದ ಸುದ್ದಿಯಲ್ಲಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಗೆಲುವು ಜೊತೆಗೆ ಕರ್ನಾಟಕ, ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ಉಪ ಚುನಾವಣೆಗಳಲ್ಲಿ ಗೆಲುವು ಕಂಡಿರುವ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಎಲ್ಲಾ ರಾಜ್ಯಗಳಿಗೂ ಪ್ರತ್ಯೇಕವಾಗಿ, ಆಯಾ ರಾಜ್ಯಗಳ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ಭಾರತವನ್ನು ವಿಶ್ವದಲ್ಲಿ ಹೆಚ್ಚಾಗಿ ಗುರುತಿಸುವುದು ಪ್ರಜಾಪ್ರಭಯತ್ವ ಮತ್ತು ವೈವಿದ್ಯತೆಯಿಂದಾಗಿ. ಇಲ್ಲಿನ ಪ್ರತಿ ರಾಜ್ಯಗಳಲ್ಲೂ ವೈವಿದ್ಯಮಯ ಭಾಷೆಗಳಿವೆ. ರಾಜ್ಯ ಭಾಷೆ ಒಂದಾದರೇ, ಅದರೋಳಗೆ ಬದುಕುವ ಜನರಲ್ಲಿ ಮತ್ತಷ್ಟು ಭಾಷೆಗಳ ಸೊಗಡು ಅಡಗಿದೆ. ಪ್ರಧಾನಿಯವರು ಇಂದು ತಮ್ಮ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಲು ಬಳಸಿರುವುದು ಕೂಡ ಆ ವೈವಿದ್ಯತೆಯೇ ಆಗಿದೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ದೊರಕಿಸಿಕೊಟ್ಟದ್ದಕ್ಕಾಗಿ ಅಲ್ಲಿನ ಮತದಾರರಿಗೆ, ಎನ್‌ಡಿಎಯ ಎಲ್ಲ ಕಾರ್ಯಕರ್ತರಿಗೆ, ಬಿಹಾರದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ.

’ಬಿಹಾರವು ಪ್ರಜಾಪ್ರಭುತ್ವದ ಮೊದಲ ಪಾಠವನ್ನು ಜಗತ್ತಿಗೆ ಕಲಿಸಿದೆ. ಪ್ರಜಾಪ್ರಭುತ್ವ ಹೇಗೆ ಬಲಗೊಳ್ಳುತ್ತದೆ ಎಂಬುದನ್ನು ಇಂದು ಬಿಹಾರ ಮತ್ತೆ ಜಗತ್ತಿಗೆ ತಿಳಿಸಿದೆ. ದಾಖಲೆಯ ಸಂಖ್ಯೆಯಲ್ಲಿ ಬಡವರು, ವಂಚಿತರು ಮತ್ತು ಮಹಿಳೆಯರು ಸಹ ಮತ ಚಲಾಯಿಸಿದ್ದಾರೆ ಮತ್ತು ಇಂದು ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ” ಎಂದು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯನ್ನು ಪ್ರಶಂಸಿಸುತ್ತಾ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲೆ ನಂಬಿಕೆಯನನ್ನು ಜನ ಹೊಂದಿರುವುದನ್ನು ಈ ಗೆಲುವು ಮತ್ತೆ ದೃಢಿಕರಿಸಿದೆ ಎಂದಿದ್ದಾರೆ.

ಜೊತೆಗೆ ಕಾರ್ಯಕರ್ತರ ಶ್ರಮ ಮತ್ತು ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಪ್ರಬಲ ಪೈಪೊಟಿಯ ನಡುವೆ ನಿನ್ನೆ ಜಯ ಸಾಧಿಸಿದ್ದಾರೆ. ಬಿಜೆಪಿ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ತೆಲುಗಿನಲ್ಲಿಯೇ ತೆಲಂಗಾಣದ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ಒಪ್ಪಿಕೊಂಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಗುಜರಾತ್ ಉಪ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಗೆಲುವಿನ ಕುರಿತು ಮೋದಿ ’ಗುಜರಾತ್ ಮತ್ತು ಬಿಜೆಪಿ ನಡುವಿನ ಬಾಂಧವ್ಯ ಬೇರ್ಪಡಿಸಲಾಗದು!” ಎಂದು ಗುಜರಾತಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

8 ಉಪಚುನಾವಣೆಗಳಲ್ಲಿ ಗೆಲುವು ನೀಡಿದ ರಾಜ್ಯದ ಜನರ ವಾತ್ಸಲ್ಯ ಮತ್ತೊಮ್ಮೆ ಕಂಡು ಬಂದಿದೆ. ಗುಜರಾತ್ ಜನರ ಬೆಂಬಲಕ್ಕೆ ನಾನು ಅಭಾರಿ ಎಂದಿದ್ದಾರೆ.

ಮಣಿಪುರ ಮತ್ತು ಮಧ್ಯಪ್ರದೇಶದ ಜನರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಪ್ರತಿ ಬಾರಿ ವಿದೇಶ, ರಾಜ್ಯ ಪ್ರವಾಸಕ್ಕೆ, ತಮ್ಮ ಕಾರ್ಯಗಳಿಗೆ ಹೊರ ರಾಜ್ಯಗಳಿಗೆ ಭೇಟಿ ಕೊಟ್ಟಾಗ ತಮ್ಮ ವೇಷಭೂಷಣಗಳಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ.

ಈ ಬಾರಿ ಕೂಡ ತಮ್ಮ ಭಾಷ ವೈವಿದ್ಯತೆಯಿಂದ ಸುದ್ದಿಯಾಗಿದ್ದಾರೆ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿಯವರ ಟ್ವೀಟ್‌ಗಳನ್ನು ಮೆಚ್ಚಿದ್ದಾರೆ. ಹಿಂದೆ ಹೇರಿಕೆ ಬಗ್ಗೆ ಹೆಚ್ಚು ಚರ್ಚೆಗಳು ನಡೆದ ಸಂದರ್ಭಕ್ಕೆ ಈ ಟ್ವೀಟ್‌ಗಳನ್ನು ಹೋಲಿಸಬಹುದಾಗಿದೆ.

ಬಿಜೆಪಿ ಗೆಲುವಿನ ಬಗ್ಗೆ ಆಯಾ ರಾಜ್ಯಗಳ ಜನರಿಗೆ ಆಯಾ ಭಾಷೆಗಳಲ್ಲಿ ಧನ್ಯವಾದ ಸಲ್ಲಿಸುವ ಪ್ರಧಾನಿಯವರು, ತಮ್ಮ ಟ್ವೀಟ್‌ಗಳಲ್ಲಿ ಎಲ್ಲಾ ಭಾಷೆಗಳನ್ನು ಬಳಸುವಂತೆಯೇ, ಜನರಿಗೂ ಭಾಷಾ ಹೇರಿಕೆ ವಿರುದ್ಧ ಪ್ರತಿಭಟಿಸಲು ಕರೆ ನೀಡಲಿ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...