Homeಮುಖಪುಟಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಪ್ರಧಾನಿ ಮೋದಿ ಹಲವು ಬಾರಿ ತಮ್ಮ ವೇಷಭೂಷಣಗಳಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ತಮ್ಮ ಭಾಷಾ ವೈವಿದ್ಯತೆಯಿಂದ ಸುದ್ದಿಯಲ್ಲಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಗೆಲುವು ಜೊತೆಗೆ ಕರ್ನಾಟಕ, ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ಉಪ ಚುನಾವಣೆಗಳಲ್ಲಿ ಗೆಲುವು ಕಂಡಿರುವ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಎಲ್ಲಾ ರಾಜ್ಯಗಳಿಗೂ ಪ್ರತ್ಯೇಕವಾಗಿ, ಆಯಾ ರಾಜ್ಯಗಳ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ಭಾರತವನ್ನು ವಿಶ್ವದಲ್ಲಿ ಹೆಚ್ಚಾಗಿ ಗುರುತಿಸುವುದು ಪ್ರಜಾಪ್ರಭಯತ್ವ ಮತ್ತು ವೈವಿದ್ಯತೆಯಿಂದಾಗಿ. ಇಲ್ಲಿನ ಪ್ರತಿ ರಾಜ್ಯಗಳಲ್ಲೂ ವೈವಿದ್ಯಮಯ ಭಾಷೆಗಳಿವೆ. ರಾಜ್ಯ ಭಾಷೆ ಒಂದಾದರೇ, ಅದರೋಳಗೆ ಬದುಕುವ ಜನರಲ್ಲಿ ಮತ್ತಷ್ಟು ಭಾಷೆಗಳ ಸೊಗಡು ಅಡಗಿದೆ. ಪ್ರಧಾನಿಯವರು ಇಂದು ತಮ್ಮ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಲು ಬಳಸಿರುವುದು ಕೂಡ ಆ ವೈವಿದ್ಯತೆಯೇ ಆಗಿದೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ದೊರಕಿಸಿಕೊಟ್ಟದ್ದಕ್ಕಾಗಿ ಅಲ್ಲಿನ ಮತದಾರರಿಗೆ, ಎನ್‌ಡಿಎಯ ಎಲ್ಲ ಕಾರ್ಯಕರ್ತರಿಗೆ, ಬಿಹಾರದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ.

’ಬಿಹಾರವು ಪ್ರಜಾಪ್ರಭುತ್ವದ ಮೊದಲ ಪಾಠವನ್ನು ಜಗತ್ತಿಗೆ ಕಲಿಸಿದೆ. ಪ್ರಜಾಪ್ರಭುತ್ವ ಹೇಗೆ ಬಲಗೊಳ್ಳುತ್ತದೆ ಎಂಬುದನ್ನು ಇಂದು ಬಿಹಾರ ಮತ್ತೆ ಜಗತ್ತಿಗೆ ತಿಳಿಸಿದೆ. ದಾಖಲೆಯ ಸಂಖ್ಯೆಯಲ್ಲಿ ಬಡವರು, ವಂಚಿತರು ಮತ್ತು ಮಹಿಳೆಯರು ಸಹ ಮತ ಚಲಾಯಿಸಿದ್ದಾರೆ ಮತ್ತು ಇಂದು ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ” ಎಂದು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯನ್ನು ಪ್ರಶಂಸಿಸುತ್ತಾ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲೆ ನಂಬಿಕೆಯನನ್ನು ಜನ ಹೊಂದಿರುವುದನ್ನು ಈ ಗೆಲುವು ಮತ್ತೆ ದೃಢಿಕರಿಸಿದೆ ಎಂದಿದ್ದಾರೆ.

ಜೊತೆಗೆ ಕಾರ್ಯಕರ್ತರ ಶ್ರಮ ಮತ್ತು ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಪ್ರಬಲ ಪೈಪೊಟಿಯ ನಡುವೆ ನಿನ್ನೆ ಜಯ ಸಾಧಿಸಿದ್ದಾರೆ. ಬಿಜೆಪಿ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ತೆಲುಗಿನಲ್ಲಿಯೇ ತೆಲಂಗಾಣದ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ಒಪ್ಪಿಕೊಂಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಗುಜರಾತ್ ಉಪ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಗೆಲುವಿನ ಕುರಿತು ಮೋದಿ ’ಗುಜರಾತ್ ಮತ್ತು ಬಿಜೆಪಿ ನಡುವಿನ ಬಾಂಧವ್ಯ ಬೇರ್ಪಡಿಸಲಾಗದು!” ಎಂದು ಗುಜರಾತಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

8 ಉಪಚುನಾವಣೆಗಳಲ್ಲಿ ಗೆಲುವು ನೀಡಿದ ರಾಜ್ಯದ ಜನರ ವಾತ್ಸಲ್ಯ ಮತ್ತೊಮ್ಮೆ ಕಂಡು ಬಂದಿದೆ. ಗುಜರಾತ್ ಜನರ ಬೆಂಬಲಕ್ಕೆ ನಾನು ಅಭಾರಿ ಎಂದಿದ್ದಾರೆ.

ಮಣಿಪುರ ಮತ್ತು ಮಧ್ಯಪ್ರದೇಶದ ಜನರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಪ್ರತಿ ಬಾರಿ ವಿದೇಶ, ರಾಜ್ಯ ಪ್ರವಾಸಕ್ಕೆ, ತಮ್ಮ ಕಾರ್ಯಗಳಿಗೆ ಹೊರ ರಾಜ್ಯಗಳಿಗೆ ಭೇಟಿ ಕೊಟ್ಟಾಗ ತಮ್ಮ ವೇಷಭೂಷಣಗಳಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ.

ಈ ಬಾರಿ ಕೂಡ ತಮ್ಮ ಭಾಷ ವೈವಿದ್ಯತೆಯಿಂದ ಸುದ್ದಿಯಾಗಿದ್ದಾರೆ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿಯವರ ಟ್ವೀಟ್‌ಗಳನ್ನು ಮೆಚ್ಚಿದ್ದಾರೆ. ಹಿಂದೆ ಹೇರಿಕೆ ಬಗ್ಗೆ ಹೆಚ್ಚು ಚರ್ಚೆಗಳು ನಡೆದ ಸಂದರ್ಭಕ್ಕೆ ಈ ಟ್ವೀಟ್‌ಗಳನ್ನು ಹೋಲಿಸಬಹುದಾಗಿದೆ.

ಬಿಜೆಪಿ ಗೆಲುವಿನ ಬಗ್ಗೆ ಆಯಾ ರಾಜ್ಯಗಳ ಜನರಿಗೆ ಆಯಾ ಭಾಷೆಗಳಲ್ಲಿ ಧನ್ಯವಾದ ಸಲ್ಲಿಸುವ ಪ್ರಧಾನಿಯವರು, ತಮ್ಮ ಟ್ವೀಟ್‌ಗಳಲ್ಲಿ ಎಲ್ಲಾ ಭಾಷೆಗಳನ್ನು ಬಳಸುವಂತೆಯೇ, ಜನರಿಗೂ ಭಾಷಾ ಹೇರಿಕೆ ವಿರುದ್ಧ ಪ್ರತಿಭಟಿಸಲು ಕರೆ ನೀಡಲಿ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...