Homeಮುಖಪುಟಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಪ್ರಧಾನಿ ಮೋದಿ ಹಲವು ಬಾರಿ ತಮ್ಮ ವೇಷಭೂಷಣಗಳಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ತಮ್ಮ ಭಾಷಾ ವೈವಿದ್ಯತೆಯಿಂದ ಸುದ್ದಿಯಲ್ಲಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಗೆಲುವು ಜೊತೆಗೆ ಕರ್ನಾಟಕ, ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ಉಪ ಚುನಾವಣೆಗಳಲ್ಲಿ ಗೆಲುವು ಕಂಡಿರುವ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಎಲ್ಲಾ ರಾಜ್ಯಗಳಿಗೂ ಪ್ರತ್ಯೇಕವಾಗಿ, ಆಯಾ ರಾಜ್ಯಗಳ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ಭಾರತವನ್ನು ವಿಶ್ವದಲ್ಲಿ ಹೆಚ್ಚಾಗಿ ಗುರುತಿಸುವುದು ಪ್ರಜಾಪ್ರಭಯತ್ವ ಮತ್ತು ವೈವಿದ್ಯತೆಯಿಂದಾಗಿ. ಇಲ್ಲಿನ ಪ್ರತಿ ರಾಜ್ಯಗಳಲ್ಲೂ ವೈವಿದ್ಯಮಯ ಭಾಷೆಗಳಿವೆ. ರಾಜ್ಯ ಭಾಷೆ ಒಂದಾದರೇ, ಅದರೋಳಗೆ ಬದುಕುವ ಜನರಲ್ಲಿ ಮತ್ತಷ್ಟು ಭಾಷೆಗಳ ಸೊಗಡು ಅಡಗಿದೆ. ಪ್ರಧಾನಿಯವರು ಇಂದು ತಮ್ಮ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಲು ಬಳಸಿರುವುದು ಕೂಡ ಆ ವೈವಿದ್ಯತೆಯೇ ಆಗಿದೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ದೊರಕಿಸಿಕೊಟ್ಟದ್ದಕ್ಕಾಗಿ ಅಲ್ಲಿನ ಮತದಾರರಿಗೆ, ಎನ್‌ಡಿಎಯ ಎಲ್ಲ ಕಾರ್ಯಕರ್ತರಿಗೆ, ಬಿಹಾರದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ.

’ಬಿಹಾರವು ಪ್ರಜಾಪ್ರಭುತ್ವದ ಮೊದಲ ಪಾಠವನ್ನು ಜಗತ್ತಿಗೆ ಕಲಿಸಿದೆ. ಪ್ರಜಾಪ್ರಭುತ್ವ ಹೇಗೆ ಬಲಗೊಳ್ಳುತ್ತದೆ ಎಂಬುದನ್ನು ಇಂದು ಬಿಹಾರ ಮತ್ತೆ ಜಗತ್ತಿಗೆ ತಿಳಿಸಿದೆ. ದಾಖಲೆಯ ಸಂಖ್ಯೆಯಲ್ಲಿ ಬಡವರು, ವಂಚಿತರು ಮತ್ತು ಮಹಿಳೆಯರು ಸಹ ಮತ ಚಲಾಯಿಸಿದ್ದಾರೆ ಮತ್ತು ಇಂದು ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ” ಎಂದು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯನ್ನು ಪ್ರಶಂಸಿಸುತ್ತಾ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲೆ ನಂಬಿಕೆಯನನ್ನು ಜನ ಹೊಂದಿರುವುದನ್ನು ಈ ಗೆಲುವು ಮತ್ತೆ ದೃಢಿಕರಿಸಿದೆ ಎಂದಿದ್ದಾರೆ.

ಜೊತೆಗೆ ಕಾರ್ಯಕರ್ತರ ಶ್ರಮ ಮತ್ತು ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಪ್ರಬಲ ಪೈಪೊಟಿಯ ನಡುವೆ ನಿನ್ನೆ ಜಯ ಸಾಧಿಸಿದ್ದಾರೆ. ಬಿಜೆಪಿ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ತೆಲುಗಿನಲ್ಲಿಯೇ ತೆಲಂಗಾಣದ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ಒಪ್ಪಿಕೊಂಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಗುಜರಾತ್ ಉಪ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಗೆಲುವಿನ ಕುರಿತು ಮೋದಿ ’ಗುಜರಾತ್ ಮತ್ತು ಬಿಜೆಪಿ ನಡುವಿನ ಬಾಂಧವ್ಯ ಬೇರ್ಪಡಿಸಲಾಗದು!” ಎಂದು ಗುಜರಾತಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

8 ಉಪಚುನಾವಣೆಗಳಲ್ಲಿ ಗೆಲುವು ನೀಡಿದ ರಾಜ್ಯದ ಜನರ ವಾತ್ಸಲ್ಯ ಮತ್ತೊಮ್ಮೆ ಕಂಡು ಬಂದಿದೆ. ಗುಜರಾತ್ ಜನರ ಬೆಂಬಲಕ್ಕೆ ನಾನು ಅಭಾರಿ ಎಂದಿದ್ದಾರೆ.

ಮಣಿಪುರ ಮತ್ತು ಮಧ್ಯಪ್ರದೇಶದ ಜನರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಪ್ರತಿ ಬಾರಿ ವಿದೇಶ, ರಾಜ್ಯ ಪ್ರವಾಸಕ್ಕೆ, ತಮ್ಮ ಕಾರ್ಯಗಳಿಗೆ ಹೊರ ರಾಜ್ಯಗಳಿಗೆ ಭೇಟಿ ಕೊಟ್ಟಾಗ ತಮ್ಮ ವೇಷಭೂಷಣಗಳಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ.

ಈ ಬಾರಿ ಕೂಡ ತಮ್ಮ ಭಾಷ ವೈವಿದ್ಯತೆಯಿಂದ ಸುದ್ದಿಯಾಗಿದ್ದಾರೆ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿಯವರ ಟ್ವೀಟ್‌ಗಳನ್ನು ಮೆಚ್ಚಿದ್ದಾರೆ. ಹಿಂದೆ ಹೇರಿಕೆ ಬಗ್ಗೆ ಹೆಚ್ಚು ಚರ್ಚೆಗಳು ನಡೆದ ಸಂದರ್ಭಕ್ಕೆ ಈ ಟ್ವೀಟ್‌ಗಳನ್ನು ಹೋಲಿಸಬಹುದಾಗಿದೆ.

ಬಿಜೆಪಿ ಗೆಲುವಿನ ಬಗ್ಗೆ ಆಯಾ ರಾಜ್ಯಗಳ ಜನರಿಗೆ ಆಯಾ ಭಾಷೆಗಳಲ್ಲಿ ಧನ್ಯವಾದ ಸಲ್ಲಿಸುವ ಪ್ರಧಾನಿಯವರು, ತಮ್ಮ ಟ್ವೀಟ್‌ಗಳಲ್ಲಿ ಎಲ್ಲಾ ಭಾಷೆಗಳನ್ನು ಬಳಸುವಂತೆಯೇ, ಜನರಿಗೂ ಭಾಷಾ ಹೇರಿಕೆ ವಿರುದ್ಧ ಪ್ರತಿಭಟಿಸಲು ಕರೆ ನೀಡಲಿ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...