Homeಮುಖಪುಟಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಗೆಲುವು ಸಂಭ್ರಮಿಸಲು ಹಿಂದಿ ಮಾತ್ರವಲ್ಲ ವೈವಿದ್ಯಮಯ ಭಾಷೆಗಳು ಬೇಕು!

ಪ್ರಧಾನಿ ಮೋದಿ ಹಲವು ಬಾರಿ ತಮ್ಮ ವೇಷಭೂಷಣಗಳಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ತಮ್ಮ ಭಾಷಾ ವೈವಿದ್ಯತೆಯಿಂದ ಸುದ್ದಿಯಲ್ಲಿದ್ದಾರೆ.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯ ಗೆಲುವು ಜೊತೆಗೆ ಕರ್ನಾಟಕ, ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ಉಪ ಚುನಾವಣೆಗಳಲ್ಲಿ ಗೆಲುವು ಕಂಡಿರುವ ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಎಲ್ಲಾ ರಾಜ್ಯಗಳಿಗೂ ಪ್ರತ್ಯೇಕವಾಗಿ, ಆಯಾ ರಾಜ್ಯಗಳ ಭಾಷೆಯಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

ಭಾರತವನ್ನು ವಿಶ್ವದಲ್ಲಿ ಹೆಚ್ಚಾಗಿ ಗುರುತಿಸುವುದು ಪ್ರಜಾಪ್ರಭಯತ್ವ ಮತ್ತು ವೈವಿದ್ಯತೆಯಿಂದಾಗಿ. ಇಲ್ಲಿನ ಪ್ರತಿ ರಾಜ್ಯಗಳಲ್ಲೂ ವೈವಿದ್ಯಮಯ ಭಾಷೆಗಳಿವೆ. ರಾಜ್ಯ ಭಾಷೆ ಒಂದಾದರೇ, ಅದರೋಳಗೆ ಬದುಕುವ ಜನರಲ್ಲಿ ಮತ್ತಷ್ಟು ಭಾಷೆಗಳ ಸೊಗಡು ಅಡಗಿದೆ. ಪ್ರಧಾನಿಯವರು ಇಂದು ತಮ್ಮ ಅಭ್ಯರ್ಥಿಗಳ ಗೆಲುವನ್ನು ಸಂಭ್ರಮಿಸಲು ಬಳಸಿರುವುದು ಕೂಡ ಆ ವೈವಿದ್ಯತೆಯೇ ಆಗಿದೆ.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಬಹುಮತ ದೊರಕಿಸಿಕೊಟ್ಟದ್ದಕ್ಕಾಗಿ ಅಲ್ಲಿನ ಮತದಾರರಿಗೆ, ಎನ್‌ಡಿಎಯ ಎಲ್ಲ ಕಾರ್ಯಕರ್ತರಿಗೆ, ಬಿಹಾರದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ.

’ಬಿಹಾರವು ಪ್ರಜಾಪ್ರಭುತ್ವದ ಮೊದಲ ಪಾಠವನ್ನು ಜಗತ್ತಿಗೆ ಕಲಿಸಿದೆ. ಪ್ರಜಾಪ್ರಭುತ್ವ ಹೇಗೆ ಬಲಗೊಳ್ಳುತ್ತದೆ ಎಂಬುದನ್ನು ಇಂದು ಬಿಹಾರ ಮತ್ತೆ ಜಗತ್ತಿಗೆ ತಿಳಿಸಿದೆ. ದಾಖಲೆಯ ಸಂಖ್ಯೆಯಲ್ಲಿ ಬಡವರು, ವಂಚಿತರು ಮತ್ತು ಮಹಿಳೆಯರು ಸಹ ಮತ ಚಲಾಯಿಸಿದ್ದಾರೆ ಮತ್ತು ಇಂದು ಅಭಿವೃದ್ಧಿಗೆ ತಮ್ಮ ಮತ ನೀಡಿದ್ದಾರೆ” ಎಂದು ಹಿಂದಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯನ್ನು ಪ್ರಶಂಸಿಸುತ್ತಾ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲೆ ನಂಬಿಕೆಯನನ್ನು ಜನ ಹೊಂದಿರುವುದನ್ನು ಈ ಗೆಲುವು ಮತ್ತೆ ದೃಢಿಕರಿಸಿದೆ ಎಂದಿದ್ದಾರೆ.

ಜೊತೆಗೆ ಕಾರ್ಯಕರ್ತರ ಶ್ರಮ ಮತ್ತು ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ತೆಲಂಗಾಣದ ದುಬ್ಬಾಕ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್ ರಾವ್ ಪ್ರಬಲ ಪೈಪೊಟಿಯ ನಡುವೆ ನಿನ್ನೆ ಜಯ ಸಾಧಿಸಿದ್ದಾರೆ. ಬಿಜೆಪಿ ಗೆಲುವನ್ನು ಸಂಭ್ರಮಿಸಿರುವ ಪ್ರಧಾನಿ ಮೋದಿ ತೆಲುಗಿನಲ್ಲಿಯೇ ತೆಲಂಗಾಣದ ಜನತೆಗೆ ಧನ್ಯವಾದ ಹೇಳಿದ್ದಾರೆ. ಬಿಜೆಪಿ ಪ್ರಣಾಳಿಕೆಯನ್ನು ಒಪ್ಪಿಕೊಂಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ಗುಜರಾತ್ ಉಪ ಚುನಾವಣೆಯಲ್ಲಿ 8 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಗೆಲುವಿನ ಕುರಿತು ಮೋದಿ ’ಗುಜರಾತ್ ಮತ್ತು ಬಿಜೆಪಿ ನಡುವಿನ ಬಾಂಧವ್ಯ ಬೇರ್ಪಡಿಸಲಾಗದು!” ಎಂದು ಗುಜರಾತಿ ಭಾಷೆಯಲ್ಲಿ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

8 ಉಪಚುನಾವಣೆಗಳಲ್ಲಿ ಗೆಲುವು ನೀಡಿದ ರಾಜ್ಯದ ಜನರ ವಾತ್ಸಲ್ಯ ಮತ್ತೊಮ್ಮೆ ಕಂಡು ಬಂದಿದೆ. ಗುಜರಾತ್ ಜನರ ಬೆಂಬಲಕ್ಕೆ ನಾನು ಅಭಾರಿ ಎಂದಿದ್ದಾರೆ.

ಮಣಿಪುರ ಮತ್ತು ಮಧ್ಯಪ್ರದೇಶದ ಜನರಿಗೆ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಪ್ರತಿ ಬಾರಿ ವಿದೇಶ, ರಾಜ್ಯ ಪ್ರವಾಸಕ್ಕೆ, ತಮ್ಮ ಕಾರ್ಯಗಳಿಗೆ ಹೊರ ರಾಜ್ಯಗಳಿಗೆ ಭೇಟಿ ಕೊಟ್ಟಾಗ ತಮ್ಮ ವೇಷಭೂಷಣಗಳಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ.

ಈ ಬಾರಿ ಕೂಡ ತಮ್ಮ ಭಾಷ ವೈವಿದ್ಯತೆಯಿಂದ ಸುದ್ದಿಯಾಗಿದ್ದಾರೆ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿಯವರ ಟ್ವೀಟ್‌ಗಳನ್ನು ಮೆಚ್ಚಿದ್ದಾರೆ. ಹಿಂದೆ ಹೇರಿಕೆ ಬಗ್ಗೆ ಹೆಚ್ಚು ಚರ್ಚೆಗಳು ನಡೆದ ಸಂದರ್ಭಕ್ಕೆ ಈ ಟ್ವೀಟ್‌ಗಳನ್ನು ಹೋಲಿಸಬಹುದಾಗಿದೆ.

ಬಿಜೆಪಿ ಗೆಲುವಿನ ಬಗ್ಗೆ ಆಯಾ ರಾಜ್ಯಗಳ ಜನರಿಗೆ ಆಯಾ ಭಾಷೆಗಳಲ್ಲಿ ಧನ್ಯವಾದ ಸಲ್ಲಿಸುವ ಪ್ರಧಾನಿಯವರು, ತಮ್ಮ ಟ್ವೀಟ್‌ಗಳಲ್ಲಿ ಎಲ್ಲಾ ಭಾಷೆಗಳನ್ನು ಬಳಸುವಂತೆಯೇ, ಜನರಿಗೂ ಭಾಷಾ ಹೇರಿಕೆ ವಿರುದ್ಧ ಪ್ರತಿಭಟಿಸಲು ಕರೆ ನೀಡಲಿ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವಿನೀತಿ: ಬಂಧನದಲ್ಲಿರುವ ಕೇರಳ ಮೂಲದ ಪತ್ರಕರ್ತನ ಪತ್ನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...