Homeಕರ್ನಾಟಕಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; 'ರಸೋಕಿನ' ತಂಡದಿಂದ ವಿಶಿಷ್ಟ ಪ್ರತಿರೋಧ

ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

"ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ" ಎಂದು ತಂಡದ ಕಿರಣ್.ಬಿ.ಕೆ ಹೇಳಿದರು. 

- Advertisement -
- Advertisement -

‘ರಸೋಕಿನ’ ತಂಡವು, “ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ” ಎಂಬ ಪೋಸ್ಟರ್ ತಯಾರಿಸಿ, ಹಿಂದಿ ದಿವಸ್‌ಗೆ ವಿಶಿಷ್ಟವಾದ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದೆ. ಸಧ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಇದು ವೈರಲ್ ಆಗುತ್ತಿದೆ.

ಮೈಸೂರಿನ ಸಮಾನ ಮನಸ್ಕ ಗೆಳೆಯರು ಒಟ್ಟುಗೂಡಿ ಆರಂಭಿಸಿರುವ ರಸೋಕಿನ ತಂಡವು, ಕನ್ನಡದ ಕಂಪನ್ನು ಪಸರಿಸುವ ಸಲುವಾಗಿ ಕೆಲಸ ಮಾಡುತ್ತಿದೆ.

ಸಿನಿಮಾ, ಸಂಗೀತ, ಸಾಹಿತ್ಯ, ರಂಗಭೂಮಿಗೆ ಸಂಬಂಧಿಸಿದಂತೆ ವಿಭಿನ್ನ ರೀತಿಯಲ್ಲಿ ಪೋಸ್ಟರ್‌ಗಳನ್ನು ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವುದರೊಟ್ಟಿಗೆ, ವಿಶಿಷ್ಟವಾದ ಸಾಹಿತ್ಯಿಕ ವಿನ್ಯಾಸಗಳುಳ್ಳ ಕನ್ನಡದ ಟೀ-ಶರ್ಟ್‌ಗಳ ತಯಾರಿಕೆಯನ್ನೂ ಮಾಡುತ್ತಿದ್ದಾರೆ. ವಾಲ್‌ಫ್ರೇಮ್, ಗ್ರೀಟಿಂಗ್ಸ್‌, ಪೋಸ್ಟರ್‌ಗಳನ್ನು ತಯಾರಿಸಿ ಒಂದು ಉತ್ಪನ್ನವಾಗಿಯೂ ಮಾರಾಟ ಮಾಡುತ್ತಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಇದೀಗ ಹಿಂದಿ ದಿವಸ್‌ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ, ಕನ್ನಡದ ಪ್ರಮುಖ ಕವಿ ಜಿ.ಪಿ.ರಾಜರತ್ನಂ ಬರೆದಿರುವ ಪ್ರಖ್ಯಾತ ಸಾಲೊಂದನ್ನು ಬಳಸಿಕೊಂಡು ಪೋಸ್ಟರ್ ತಯಾರಿಸಿದ್ದಾರೆ. ಹಿಂದಿ ಹೇರಿಕೆಯನ್ನು ವಿರೋಧಿಸುವ ವಿಶಿಷ್ಟ ಪ್ರತಿಭಟನೆಗಳಲ್ಲಿ ಇದೂ ಒಂದು.

ಇದರೊಟ್ಟಿಗೆ, ಕನ್ನಡ ಮತ್ತು ಕಲೆಗೆ ಕೊಡುಗೆ ನೀಡಿರುವವರ ನೆನಕೆಗಾಗಿ, ಅವರ ಜನ್ಮದಿನದ ಗ್ರೀಟಿಂಗ್ಸ್‌‌ಗಳನ್ನು ವಿನ್ಯಾಸಗೊಳಿಸುತ್ತಾರೆ. ಇದು ಈಗಾಗಲೇ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ರಸೋಕಿನ ತಂಡದ ನನಿತ್.ಬಿ.ಎಸ್ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ನಮ್ಮ ಪ್ರತಿಕ್ರಿಯೆಯಲ್ಲಿ ವಿಶೇಷತೆಯೇನಿಲ್ಲ. ನಮ್ಮ ನಿಲುವನ್ನು ಈ ಪೋಸ್ಟರ್ ಮುಖಾಂತರವೇ ಹೇಳಿದ್ದೇವೆ. ಹಿಂದಿ ದಿವಸ್ ಆಚರಿಸ್ತೀರ. ಆಚರಿಸಿಕೊಳ್ಳಿ. ಅದಕ್ಕೆ ನಮ್ಮ ವಿರೋಧವೇನಿಲ್ಲ.
ನಮ್ಮ ವಿರೋಧವಿರುವುದು ಕನ್ನಡನಾಡಿನಲ್ಲಿ ‘ಹಿಂದಿ ದಿವಸ್’ ಆಚರಣೆ ಮಾಡುವುದರ ಬಗ್ಗೆ. ಕನ್ನಡ ನಾಡಿನ ಮೇಲೆ ಇದು ಹಿಂದಿ ಹೇರಿಕೆಯಲ್ಲದೆ ಮತ್ತಿನ್ನೇನು ಆಗಿರಲಾರದು” ಎಂದು ಹೇಳಿದರು.

ತಂಡದ ಮತ್ತೊಬ್ಬರಾದ ಕಿರಣ್.ಬಿ.ಕೆ ಪ್ರತಿಕ್ರಿಯಿಸಿ, “ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ” ಎಂದು ಹೇಳಿದರು. 

ದೇಶದಲ್ಲಿ ಹಿಂದಿ ಹೇರಿಕೆಯ ಸಂಚು ವ್ಯಾಪಕವಾಗಿ ನಡೆಯುತ್ತಿದ್ದು, ಹಲವು ಜನ ಪ್ರಗತಿಪರ ಚಿಂತನೆಯುಳ್ಳವರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಅನೇಕರು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...