Homeಕರ್ನಾಟಕಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; 'ರಸೋಕಿನ' ತಂಡದಿಂದ ವಿಶಿಷ್ಟ ಪ್ರತಿರೋಧ

ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ; ‘ರಸೋಕಿನ’ ತಂಡದಿಂದ ವಿಶಿಷ್ಟ ಪ್ರತಿರೋಧ

"ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ" ಎಂದು ತಂಡದ ಕಿರಣ್.ಬಿ.ಕೆ ಹೇಳಿದರು. 

- Advertisement -
- Advertisement -

‘ರಸೋಕಿನ’ ತಂಡವು, “ಕನ್ನಡ್ ಸುದ್ದಿಗ್ ಏನ್ರಾ ಬಂದ್ರೆ ಮಾನಾ ಉಳ್ಸಾಕಿಲ್ಲ” ಎಂಬ ಪೋಸ್ಟರ್ ತಯಾರಿಸಿ, ಹಿಂದಿ ದಿವಸ್‌ಗೆ ವಿಶಿಷ್ಟವಾದ ರೀತಿಯಲ್ಲಿ ಪ್ರತಿರೋಧ ವ್ಯಕ್ತಪಡಿಸಿದೆ. ಸಧ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಇದು ವೈರಲ್ ಆಗುತ್ತಿದೆ.

ಮೈಸೂರಿನ ಸಮಾನ ಮನಸ್ಕ ಗೆಳೆಯರು ಒಟ್ಟುಗೂಡಿ ಆರಂಭಿಸಿರುವ ರಸೋಕಿನ ತಂಡವು, ಕನ್ನಡದ ಕಂಪನ್ನು ಪಸರಿಸುವ ಸಲುವಾಗಿ ಕೆಲಸ ಮಾಡುತ್ತಿದೆ.

ಸಿನಿಮಾ, ಸಂಗೀತ, ಸಾಹಿತ್ಯ, ರಂಗಭೂಮಿಗೆ ಸಂಬಂಧಿಸಿದಂತೆ ವಿಭಿನ್ನ ರೀತಿಯಲ್ಲಿ ಪೋಸ್ಟರ್‌ಗಳನ್ನು ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡುವುದರೊಟ್ಟಿಗೆ, ವಿಶಿಷ್ಟವಾದ ಸಾಹಿತ್ಯಿಕ ವಿನ್ಯಾಸಗಳುಳ್ಳ ಕನ್ನಡದ ಟೀ-ಶರ್ಟ್‌ಗಳ ತಯಾರಿಕೆಯನ್ನೂ ಮಾಡುತ್ತಿದ್ದಾರೆ. ವಾಲ್‌ಫ್ರೇಮ್, ಗ್ರೀಟಿಂಗ್ಸ್‌, ಪೋಸ್ಟರ್‌ಗಳನ್ನು ತಯಾರಿಸಿ ಒಂದು ಉತ್ಪನ್ನವಾಗಿಯೂ ಮಾರಾಟ ಮಾಡುತ್ತಾರೆ.

ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಇದೀಗ ಹಿಂದಿ ದಿವಸ್‌ಗೆ ವಿರೋಧವನ್ನು ವ್ಯಕ್ತಪಡಿಸುತ್ತಾ, ಕನ್ನಡದ ಪ್ರಮುಖ ಕವಿ ಜಿ.ಪಿ.ರಾಜರತ್ನಂ ಬರೆದಿರುವ ಪ್ರಖ್ಯಾತ ಸಾಲೊಂದನ್ನು ಬಳಸಿಕೊಂಡು ಪೋಸ್ಟರ್ ತಯಾರಿಸಿದ್ದಾರೆ. ಹಿಂದಿ ಹೇರಿಕೆಯನ್ನು ವಿರೋಧಿಸುವ ವಿಶಿಷ್ಟ ಪ್ರತಿಭಟನೆಗಳಲ್ಲಿ ಇದೂ ಒಂದು.

ಇದರೊಟ್ಟಿಗೆ, ಕನ್ನಡ ಮತ್ತು ಕಲೆಗೆ ಕೊಡುಗೆ ನೀಡಿರುವವರ ನೆನಕೆಗಾಗಿ, ಅವರ ಜನ್ಮದಿನದ ಗ್ರೀಟಿಂಗ್ಸ್‌‌ಗಳನ್ನು ವಿನ್ಯಾಸಗೊಳಿಸುತ್ತಾರೆ. ಇದು ಈಗಾಗಲೇ ಹಲವರ ಮೆಚ್ಚುಗೆಗೆ ಪಾತ್ರವಾಗಿದೆ.

ರಸೋಕಿನ ತಂಡದ ನನಿತ್.ಬಿ.ಎಸ್ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ನಮ್ಮ ಪ್ರತಿಕ್ರಿಯೆಯಲ್ಲಿ ವಿಶೇಷತೆಯೇನಿಲ್ಲ. ನಮ್ಮ ನಿಲುವನ್ನು ಈ ಪೋಸ್ಟರ್ ಮುಖಾಂತರವೇ ಹೇಳಿದ್ದೇವೆ. ಹಿಂದಿ ದಿವಸ್ ಆಚರಿಸ್ತೀರ. ಆಚರಿಸಿಕೊಳ್ಳಿ. ಅದಕ್ಕೆ ನಮ್ಮ ವಿರೋಧವೇನಿಲ್ಲ.
ನಮ್ಮ ವಿರೋಧವಿರುವುದು ಕನ್ನಡನಾಡಿನಲ್ಲಿ ‘ಹಿಂದಿ ದಿವಸ್’ ಆಚರಣೆ ಮಾಡುವುದರ ಬಗ್ಗೆ. ಕನ್ನಡ ನಾಡಿನ ಮೇಲೆ ಇದು ಹಿಂದಿ ಹೇರಿಕೆಯಲ್ಲದೆ ಮತ್ತಿನ್ನೇನು ಆಗಿರಲಾರದು” ಎಂದು ಹೇಳಿದರು.

ತಂಡದ ಮತ್ತೊಬ್ಬರಾದ ಕಿರಣ್.ಬಿ.ಕೆ ಪ್ರತಿಕ್ರಿಯಿಸಿ, “ಇದೂ ಕೂಡ ಒಂದು ರೀತಿಯ ಪ್ರತಿಭಟನೆಯೇ ಆಗಿದೆ. ಯಾರಿಗೆ ಯಾವ ಪ್ರತಿಭಟನೆಯ ಭಾಷೆ ಗೊತ್ತಿದೆಯೋ ಹಾಗೆ ಪ್ರತಿಭಟಿಸುತ್ತಾರೆ. ನಮಗೆ ಭಾಷೆಯೇ ಪ್ರತಿಭಟನೆಯ ಸಾಧನ” ಎಂದು ಹೇಳಿದರು. 

ದೇಶದಲ್ಲಿ ಹಿಂದಿ ಹೇರಿಕೆಯ ಸಂಚು ವ್ಯಾಪಕವಾಗಿ ನಡೆಯುತ್ತಿದ್ದು, ಹಲವು ಜನ ಪ್ರಗತಿಪರ ಚಿಂತನೆಯುಳ್ಳವರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಸೇರಿದಂತೆ ಅನೇಕರು ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...