Homeಮುಖಪುಟ"ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ": ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ...

“ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್

- Advertisement -
- Advertisement -

ಕೊಲೆ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮರೆಮಾಚಿದ ಆರೋಪದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಭೋಪಾಲ್ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮಾಯಾಂಕ್ ಅವಸ್ಥಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಡಿಐಜಿ ಅವಸ್ಥಿ ಅವರಿಗೆ “ನೆಲದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ತಮ್ಮ ಸ್ವಇಚ್ಛೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅಭ್ಯಾಸ ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಜಿ.ಎಸ್ ಅಹ್ಲುವಾಲಿಯಾ ಆದೇಶ ನೀಡುವ ವೇಳೆ ಹೇಳಿದ್ದಾರೆ.

ದಾತಿಯಾ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿರುವ ಅರ್ಜಿದಾರರಾದ ಮನ್ವೇಂದ್ರ ಸಿಂಗ್ ಗುರ್ಜರ್, ಘಟನೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಪ್ರಾಸಿಕ್ಯೂಷನ್‌ನ ಹೇಳಿಕೆಗಳನ್ನು ಪ್ರಶ್ನಿಸಿ 2018ರಲ್ಲಿ ಅರ್ಜಿ ಸಲ್ಲಿಸಿದ್ದರು.

ಘಟನೆ ನಡೆದ ಸ್ಥಳದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿ ಹಾಗೂ ಸಾಕ್ಷಿದಾರರು ಉಪಸ್ಥಿತರಿರಲಿಲ್ಲ ಎಂಬುದನ್ನು ನಿರೂಪಿಸುವ ಪ್ರಯತ್ನದ ಭಾಗವಾಗಿ ಕರೆ ವಿವರ ದಾಖಲೆಗಳನ್ನು ಸಂರಕ್ಷಿಸಿಡಬೇಕು ಎಂದು ಅರ್ಜಿದಾರ ಮನ್ವೇಂದರ್ ಸಿಂಗ್ ಗುರ್ಜರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಕುರಿತು ಪ್ರತಿವಾದ ಮಂಡಿಸಿದ ಅವಸ್ಥಿ, ಈ ಅರ್ಜಿ ತೀರ್ಮಾನವಾಗುವ ಹೊತ್ತಿಗೆ ನಾನು ನನ್ನ ಹುದ್ದೆಯಿಂದ ವರ್ಗಾವಣೆಗೊಂಡಿದ್ದೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಯಾವ ಅಧಿಕಾರವೂ ನನಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ನಿರ್ದಿಷ್ಟ ಮೊಬೈಲ್ ಸಂಖ್ಯೆಗಳ ಕರೆ ವಿವರಗಳು, ಸ್ಥಳಗಳು ಮತ್ತು ಸಿಮ್ ಅನ್ನು ಸಂರಕ್ಷಿಸಿಡಬೇಕು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿರುವುದು ಹಾಗೂ ಈ ವಿವರಗಳನ್ನು ಸೆಪ್ಟೆಂಬರ್ 17, 2018ರಂದು ಅವಸ್ಥಿಗೆ ಇಮೇಲ್ ಮೂಲಕ ರವಾನಿಸಿರುವುದನ್ನು ಮತ್ತು ಅವಸ್ಥಿ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದು ಹೈಕೋರ್ಟ್ ಗಮನಿಸಿದೆ.

ಇಂತಹ ವ್ಯಕ್ತಿಗಳನ್ನು ಪೊಲೀಸ್ ಇಲಾಖೆಯಲ್ಲಿ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ? ಎಂಬುವುದರ ಕುರಿತು ತೀರ್ಮಾನಿಸಬೇಕು ಎಂದು ಮಧ್ಯಪ್ರದೇಶ ಪೊಲೀಸ್ ಮಹಾ ನಿರ್ದೇಶಕರಿಗೂ ನ್ಯಾಯಾಲಯ ಸೂಚಿಸಿದೆ.

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...