Homeಮುಖಪುಟ"ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ": ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ...

“ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್

- Advertisement -
- Advertisement -

ಕೊಲೆ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮರೆಮಾಚಿದ ಆರೋಪದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಭೋಪಾಲ್ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮಾಯಾಂಕ್ ಅವಸ್ಥಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಡಿಐಜಿ ಅವಸ್ಥಿ ಅವರಿಗೆ “ನೆಲದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ತಮ್ಮ ಸ್ವಇಚ್ಛೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅಭ್ಯಾಸ ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಜಿ.ಎಸ್ ಅಹ್ಲುವಾಲಿಯಾ ಆದೇಶ ನೀಡುವ ವೇಳೆ ಹೇಳಿದ್ದಾರೆ.

ದಾತಿಯಾ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿರುವ ಅರ್ಜಿದಾರರಾದ ಮನ್ವೇಂದ್ರ ಸಿಂಗ್ ಗುರ್ಜರ್, ಘಟನೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಪ್ರಾಸಿಕ್ಯೂಷನ್‌ನ ಹೇಳಿಕೆಗಳನ್ನು ಪ್ರಶ್ನಿಸಿ 2018ರಲ್ಲಿ ಅರ್ಜಿ ಸಲ್ಲಿಸಿದ್ದರು.

ಘಟನೆ ನಡೆದ ಸ್ಥಳದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿ ಹಾಗೂ ಸಾಕ್ಷಿದಾರರು ಉಪಸ್ಥಿತರಿರಲಿಲ್ಲ ಎಂಬುದನ್ನು ನಿರೂಪಿಸುವ ಪ್ರಯತ್ನದ ಭಾಗವಾಗಿ ಕರೆ ವಿವರ ದಾಖಲೆಗಳನ್ನು ಸಂರಕ್ಷಿಸಿಡಬೇಕು ಎಂದು ಅರ್ಜಿದಾರ ಮನ್ವೇಂದರ್ ಸಿಂಗ್ ಗುರ್ಜರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಕುರಿತು ಪ್ರತಿವಾದ ಮಂಡಿಸಿದ ಅವಸ್ಥಿ, ಈ ಅರ್ಜಿ ತೀರ್ಮಾನವಾಗುವ ಹೊತ್ತಿಗೆ ನಾನು ನನ್ನ ಹುದ್ದೆಯಿಂದ ವರ್ಗಾವಣೆಗೊಂಡಿದ್ದೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಯಾವ ಅಧಿಕಾರವೂ ನನಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ನಿರ್ದಿಷ್ಟ ಮೊಬೈಲ್ ಸಂಖ್ಯೆಗಳ ಕರೆ ವಿವರಗಳು, ಸ್ಥಳಗಳು ಮತ್ತು ಸಿಮ್ ಅನ್ನು ಸಂರಕ್ಷಿಸಿಡಬೇಕು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿರುವುದು ಹಾಗೂ ಈ ವಿವರಗಳನ್ನು ಸೆಪ್ಟೆಂಬರ್ 17, 2018ರಂದು ಅವಸ್ಥಿಗೆ ಇಮೇಲ್ ಮೂಲಕ ರವಾನಿಸಿರುವುದನ್ನು ಮತ್ತು ಅವಸ್ಥಿ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದು ಹೈಕೋರ್ಟ್ ಗಮನಿಸಿದೆ.

ಇಂತಹ ವ್ಯಕ್ತಿಗಳನ್ನು ಪೊಲೀಸ್ ಇಲಾಖೆಯಲ್ಲಿ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ? ಎಂಬುವುದರ ಕುರಿತು ತೀರ್ಮಾನಿಸಬೇಕು ಎಂದು ಮಧ್ಯಪ್ರದೇಶ ಪೊಲೀಸ್ ಮಹಾ ನಿರ್ದೇಶಕರಿಗೂ ನ್ಯಾಯಾಲಯ ಸೂಚಿಸಿದೆ.

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...