Homeಮುಖಪುಟ"ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ": ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ...

“ಕೊಲೆ ಪ್ರಕರಣದಲ್ಲಿ ಸತ್ಯಾಂಶವನ್ನು ಮರೆಮಾಚಿದ್ದಾರೆ”: ಡಿಐಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಮಧ್ಯ ಪ್ರದೇಶ ಹೈಕೋರ್ಟ್

- Advertisement -
- Advertisement -

ಕೊಲೆ ಪ್ರಕರಣವೊಂದರಲ್ಲಿ ಸತ್ಯಾಂಶಗಳನ್ನು ಮರೆಮಾಚಿದ ಆರೋಪದ ಮೇಲೆ ಮಧ್ಯಪ್ರದೇಶ ಹೈಕೋರ್ಟ್ ಭೋಪಾಲ್ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮಾಯಾಂಕ್ ಅವಸ್ಥಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಡಿಐಜಿ ಅವಸ್ಥಿ ಅವರಿಗೆ “ನೆಲದ ಕಾನೂನಿನ ಬಗ್ಗೆ ಯಾವುದೇ ಗೌರವವಿಲ್ಲ. ಅವರು ತಮ್ಮ ಸ್ವಇಚ್ಛೆಯಂತೆ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುವ ಅಭ್ಯಾಸ ಹೊಂದಿದ್ದಾರೆ” ಎಂದು ನ್ಯಾಯಮೂರ್ತಿ ಜಿ.ಎಸ್ ಅಹ್ಲುವಾಲಿಯಾ ಆದೇಶ ನೀಡುವ ವೇಳೆ ಹೇಳಿದ್ದಾರೆ.

ದಾತಿಯಾ ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿರುವ ಅರ್ಜಿದಾರರಾದ ಮನ್ವೇಂದ್ರ ಸಿಂಗ್ ಗುರ್ಜರ್, ಘಟನೆಯ ದಿನಾಂಕ ಮತ್ತು ಸ್ಥಳದ ಬಗ್ಗೆ ಪ್ರಾಸಿಕ್ಯೂಷನ್‌ನ ಹೇಳಿಕೆಗಳನ್ನು ಪ್ರಶ್ನಿಸಿ 2018ರಲ್ಲಿ ಅರ್ಜಿ ಸಲ್ಲಿಸಿದ್ದರು.

ಘಟನೆ ನಡೆದ ಸ್ಥಳದಲ್ಲಿ ಹತ್ಯೆಗೀಡಾಗಿದ್ದ ವ್ಯಕ್ತಿ ಹಾಗೂ ಸಾಕ್ಷಿದಾರರು ಉಪಸ್ಥಿತರಿರಲಿಲ್ಲ ಎಂಬುದನ್ನು ನಿರೂಪಿಸುವ ಪ್ರಯತ್ನದ ಭಾಗವಾಗಿ ಕರೆ ವಿವರ ದಾಖಲೆಗಳನ್ನು ಸಂರಕ್ಷಿಸಿಡಬೇಕು ಎಂದು ಅರ್ಜಿದಾರ ಮನ್ವೇಂದರ್ ಸಿಂಗ್ ಗುರ್ಜರ್ ತಮ್ಮ ಅರ್ಜಿಯಲ್ಲಿ ಮನವಿ ಮಾಡಿದ್ದರು. ಈ ಕುರಿತು ಪ್ರತಿವಾದ ಮಂಡಿಸಿದ ಅವಸ್ಥಿ, ಈ ಅರ್ಜಿ ತೀರ್ಮಾನವಾಗುವ ಹೊತ್ತಿಗೆ ನಾನು ನನ್ನ ಹುದ್ದೆಯಿಂದ ವರ್ಗಾವಣೆಗೊಂಡಿದ್ದೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಯಾವ ಅಧಿಕಾರವೂ ನನಗಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ನಿರ್ದಿಷ್ಟ ಮೊಬೈಲ್ ಸಂಖ್ಯೆಗಳ ಕರೆ ವಿವರಗಳು, ಸ್ಥಳಗಳು ಮತ್ತು ಸಿಮ್ ಅನ್ನು ಸಂರಕ್ಷಿಸಿಡಬೇಕು ಎಂದು ವಿಚಾರಣಾ ನ್ಯಾಯಾಲಯ ಆದೇಶಿಸಿರುವುದು ಹಾಗೂ ಈ ವಿವರಗಳನ್ನು ಸೆಪ್ಟೆಂಬರ್ 17, 2018ರಂದು ಅವಸ್ಥಿಗೆ ಇಮೇಲ್ ಮೂಲಕ ರವಾನಿಸಿರುವುದನ್ನು ಮತ್ತು ಅವಸ್ಥಿ ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಯ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿರುವುದು ಹೈಕೋರ್ಟ್ ಗಮನಿಸಿದೆ.

ಇಂತಹ ವ್ಯಕ್ತಿಗಳನ್ನು ಪೊಲೀಸ್ ಇಲಾಖೆಯಲ್ಲಿ ಉಳಿಸಿಕೊಳ್ಳಬೇಕೇ ಅಥವಾ ಬೇಡವೇ? ಎಂಬುವುದರ ಕುರಿತು ತೀರ್ಮಾನಿಸಬೇಕು ಎಂದು ಮಧ್ಯಪ್ರದೇಶ ಪೊಲೀಸ್ ಮಹಾ ನಿರ್ದೇಶಕರಿಗೂ ನ್ಯಾಯಾಲಯ ಸೂಚಿಸಿದೆ.

41 ದಲಿತ ಕುಟುಂಬಗಳಿಗೆ ಸರಕಾರವೇ ಪುನರ್ವಸತಿ ಕಲ್ಪಿಸಿದ ಸ್ಥಳದಿಂದ ಜಾಗ ಖಾಲಿ ಮಾಡಲು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...