Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...