Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...