Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...