Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...