Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...