Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...