Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...