Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...