Homeಮುಖಪುಟಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ...

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

- Advertisement -
- Advertisement -

ಬಿಜೆಪಿ ಮತ್ತು ಕೆಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಮಹಾಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಿರಹಟ್ಟಿ ದಿಂಗಾಲೇಶ್ವರ ಮಹಾಸ್ವಾಮೀಜಿ, ಧರ್ಮದಲ್ಲಿ ರಾಜಕೀಯ ಇರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ.  ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ. ನೊಂದ ಜನರು ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದ ಹೊರತುಪಡಿಸಿದರೆ ಕುರುಬ ಸಮುದಾಯ ದೊಡ್ಡದು, ಆದರೆ ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್ ಕೊಡಲಿಲ್ಲ. ಲಂಬಾಣಿ ಸಮುದಾಯಕ್ಕೆ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಲ್ಹಾದ ಜೋಷಿ ಅವರೇ ಕಾರಣ. ಬಿಜೆಪಿ ಹೈಕಮಾಂಡ್, ಕುರುಬ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. ಶೇಕಡಾ 2ರಷ್ಟು ಇರುವ ಸಮುದಾಯದ ನಾಯಕರಿಗೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಷಿಗೆ ಟಿಕೆಟ್‌ ಘೋಷಣೆ ಬೆನ್ನಲ್ಲಿ ಭಾರೀ ಅಸಮಾಧಾನ ಭುಗಿಲೆದ್ದಿತ್ತು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಬದಲಾಯಿಸುವಂತೆ ಮಾ.31ರವರೆಗೆ ದಿಂಗಾಲೇಶ್ವರ ಮಹಾಸ್ವಾಮೀಜಿ ಸಮಯವನ್ನು ಕೊಟ್ಟಿದ್ದರು. ಬೇರೆ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸ್ವಾಮೀಜಿಗಳು ಆಗ್ರಹಿಸಿದ್ದರು. ಇಲ್ಲವಾದರೆ ಪ್ರಲ್ಹಾದ ಜೋಷಿ ಯನ್ನು ಸೋಲಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಸ್ವಾಮೀಜಿಗಳು ಹೇಳಿದ್ದರು.

ಜೋಶಿ ವಿರುದ್ಧ ವಾಗ್ಧಾಳಿ ನಡೆಸಿದ್ದ ದಿಂಗಾಲೇಶ್ವರ ಮಹಾಸ್ವಾಮೀಜಿ, ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಪ್ರಲ್ಹಾದ ಜೋಷಿ , ತಾವೇ ಸಿಎಂ ಆಗಬೇಕೆಂದು ಪ್ರಲ್ಹಾದ ಜೋಷಿ ಜಾಕೆಟ್ ಹೊಲಿಸಿದ್ರು, ನಮ್ಮ ಹೋರಾಟದಿಂದಾಗಿ ಅವರ ಜಾಕೆಟ್ ಪಾಕೆಟ್ ಸೇರಿತು, ನಾವು ಯಾರ ಒತ್ತಡಕ್ಕೂ ಒಳಗಾಗುವ ಸ್ವಾಮೀಜಿಗಳಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಧಾರವಾಡ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಲಾಗಿದೆ. ಪ್ರತಿಯೊಂದು ರೀತಿಯಲ್ಲಿ ನಮಗೆ ಅನ್ಯಾಯ ಆಗಿದೆ. ನಾನು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ನಮ್ಮ ಕೆಲಸ ಮಾಡಲು ಲಿಂಗಾಯತ ನಾಯಕರು ಇಲ್ವಾ ಎಂದು ಕೇಳಿದ್ದರು. ಆದ್ದರಿಂದ ನಾವು ಕೂಡ ಈಗ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದರು.

ಲಿಂಗಾಯತ ಹಾಗೂ ಇತರ ಸಮಾಜದ ನಾಯಕರನ್ನು, ನೌಕರ, ವ್ಯಾಪಾರಿಗಳು ಸೇರಿದಂತೆ ಹಲವರು ಸಚಿವರಿಂದ ತುಳಿತಕ್ಕೆ ಒಳಗಾಗಿದ್ದಾರೆ. ಇವರ ಸೇಡಿನ ರಾಜಕಾರಣದಿಂದ ಅನೇಕ ನಾಯಕರು ಜಾತ್ಯಾತೀತವಾಗಿ ತುಳಿತಕ್ಕೆ ಒಳಗಾಗಿ, ಮಾನಸಿಕ, ದೈಹಿಕ, ಆರ್ಥಿಕ, ರಾಜಕೀಯವಾಗಿ ಹಿಂಸೆ ಅನುಭವಿಸಿದ್ದಾರೆ. ಐಟಿ, ಇಡಿ ಇತರ ದಾಳಿಯ ಭಯ ಸೃಷ್ಟಿಸಿ ಬಾಯಿ ಬಿಟ್ಟು ಮಾತನಾಡದ ಹಾಗೆ ಮಾಡಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಪ್ರಲ್ಹಾದ ಜೋಷಿ ತಮ್ಮ ಹಿಂಬಾಲಕರನ್ನು ಸೇರಿಸಿ ಪ್ರಮಾಣಿಕರನ್ನು ಬದಿಗೆ ಸರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇದೇ ನಿಮ್ಮ ನಿಜದವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...