Homeಮುಖಪುಟಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ...

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

- Advertisement -
- Advertisement -

ಬಿಜೆಪಿ ಮತ್ತು ಕೆಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಮಹಾಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಿರಹಟ್ಟಿ ದಿಂಗಾಲೇಶ್ವರ ಮಹಾಸ್ವಾಮೀಜಿ, ಧರ್ಮದಲ್ಲಿ ರಾಜಕೀಯ ಇರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ.  ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ. ನೊಂದ ಜನರು ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದ ಹೊರತುಪಡಿಸಿದರೆ ಕುರುಬ ಸಮುದಾಯ ದೊಡ್ಡದು, ಆದರೆ ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್ ಕೊಡಲಿಲ್ಲ. ಲಂಬಾಣಿ ಸಮುದಾಯಕ್ಕೆ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಲ್ಹಾದ ಜೋಷಿ ಅವರೇ ಕಾರಣ. ಬಿಜೆಪಿ ಹೈಕಮಾಂಡ್, ಕುರುಬ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. ಶೇಕಡಾ 2ರಷ್ಟು ಇರುವ ಸಮುದಾಯದ ನಾಯಕರಿಗೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಷಿಗೆ ಟಿಕೆಟ್‌ ಘೋಷಣೆ ಬೆನ್ನಲ್ಲಿ ಭಾರೀ ಅಸಮಾಧಾನ ಭುಗಿಲೆದ್ದಿತ್ತು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಬದಲಾಯಿಸುವಂತೆ ಮಾ.31ರವರೆಗೆ ದಿಂಗಾಲೇಶ್ವರ ಮಹಾಸ್ವಾಮೀಜಿ ಸಮಯವನ್ನು ಕೊಟ್ಟಿದ್ದರು. ಬೇರೆ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸ್ವಾಮೀಜಿಗಳು ಆಗ್ರಹಿಸಿದ್ದರು. ಇಲ್ಲವಾದರೆ ಪ್ರಲ್ಹಾದ ಜೋಷಿ ಯನ್ನು ಸೋಲಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಸ್ವಾಮೀಜಿಗಳು ಹೇಳಿದ್ದರು.

ಜೋಶಿ ವಿರುದ್ಧ ವಾಗ್ಧಾಳಿ ನಡೆಸಿದ್ದ ದಿಂಗಾಲೇಶ್ವರ ಮಹಾಸ್ವಾಮೀಜಿ, ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಪ್ರಲ್ಹಾದ ಜೋಷಿ , ತಾವೇ ಸಿಎಂ ಆಗಬೇಕೆಂದು ಪ್ರಲ್ಹಾದ ಜೋಷಿ ಜಾಕೆಟ್ ಹೊಲಿಸಿದ್ರು, ನಮ್ಮ ಹೋರಾಟದಿಂದಾಗಿ ಅವರ ಜಾಕೆಟ್ ಪಾಕೆಟ್ ಸೇರಿತು, ನಾವು ಯಾರ ಒತ್ತಡಕ್ಕೂ ಒಳಗಾಗುವ ಸ್ವಾಮೀಜಿಗಳಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಧಾರವಾಡ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಲಾಗಿದೆ. ಪ್ರತಿಯೊಂದು ರೀತಿಯಲ್ಲಿ ನಮಗೆ ಅನ್ಯಾಯ ಆಗಿದೆ. ನಾನು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ನಮ್ಮ ಕೆಲಸ ಮಾಡಲು ಲಿಂಗಾಯತ ನಾಯಕರು ಇಲ್ವಾ ಎಂದು ಕೇಳಿದ್ದರು. ಆದ್ದರಿಂದ ನಾವು ಕೂಡ ಈಗ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದರು.

ಲಿಂಗಾಯತ ಹಾಗೂ ಇತರ ಸಮಾಜದ ನಾಯಕರನ್ನು, ನೌಕರ, ವ್ಯಾಪಾರಿಗಳು ಸೇರಿದಂತೆ ಹಲವರು ಸಚಿವರಿಂದ ತುಳಿತಕ್ಕೆ ಒಳಗಾಗಿದ್ದಾರೆ. ಇವರ ಸೇಡಿನ ರಾಜಕಾರಣದಿಂದ ಅನೇಕ ನಾಯಕರು ಜಾತ್ಯಾತೀತವಾಗಿ ತುಳಿತಕ್ಕೆ ಒಳಗಾಗಿ, ಮಾನಸಿಕ, ದೈಹಿಕ, ಆರ್ಥಿಕ, ರಾಜಕೀಯವಾಗಿ ಹಿಂಸೆ ಅನುಭವಿಸಿದ್ದಾರೆ. ಐಟಿ, ಇಡಿ ಇತರ ದಾಳಿಯ ಭಯ ಸೃಷ್ಟಿಸಿ ಬಾಯಿ ಬಿಟ್ಟು ಮಾತನಾಡದ ಹಾಗೆ ಮಾಡಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಪ್ರಲ್ಹಾದ ಜೋಷಿ ತಮ್ಮ ಹಿಂಬಾಲಕರನ್ನು ಸೇರಿಸಿ ಪ್ರಮಾಣಿಕರನ್ನು ಬದಿಗೆ ಸರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇದೇ ನಿಮ್ಮ ನಿಜದವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...