Homeಮುಖಪುಟಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ...

ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದ ದಿಂಗಾಲೇಶ್ವರ ಸ್ವಾಮೀಜಿ; ಸ್ವತಂತ್ರವಾಗಿ ಸ್ಪರ್ಧೆ ಘೋಷಣೆ

- Advertisement -
- Advertisement -

ಬಿಜೆಪಿ ಮತ್ತು ಕೆಂದ್ರ ಸಚಿವ ಪ್ರಲ್ಹಾದ ಜೋಷಿ ವಿರುದ್ಧ ಸಿಡಿದೆದ್ದಿರುವ ದಿಂಗಾಲೇಶ್ವರ ಮಹಾಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಶಿರಹಟ್ಟಿ ದಿಂಗಾಲೇಶ್ವರ ಮಹಾಸ್ವಾಮೀಜಿ, ಧರ್ಮದಲ್ಲಿ ರಾಜಕೀಯ ಇರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು ಎಂದು ಜನರು ಬಯಸಿದ್ದಾರೆ.  ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿದೆ ಎಂದು ಜನರು ಹೇಳಿಕೊಳ್ಳುತ್ತಿದ್ದಾರೆ. ನೊಂದ ಜನರು ನೋವು ತೋಡಿಕೊಂಡಿದ್ದರಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದ ಹೊರತುಪಡಿಸಿದರೆ ಕುರುಬ ಸಮುದಾಯ ದೊಡ್ಡದು, ಆದರೆ ಕುರುಬ ಸಮುದಾಯಕ್ಕೆ ಒಂದೇ ಒಂದು ಟಿಕೆಟ್ ಕೊಡಲಿಲ್ಲ. ಲಂಬಾಣಿ ಸಮುದಾಯಕ್ಕೆ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪಲು ಪ್ರಲ್ಹಾದ ಜೋಷಿ ಅವರೇ ಕಾರಣ. ಬಿಜೆಪಿ ಹೈಕಮಾಂಡ್, ಕುರುಬ ಸಮುದಾಯ ನಮಗೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಬಹುದೊಡ್ಡ ಸಮುದಾಯವನ್ನು ಬಿಜೆಪಿ ಕಡೆಗಣಿಸಿದೆ. ಶೇಕಡಾ 2ರಷ್ಟು ಇರುವ ಸಮುದಾಯದ ನಾಯಕರಿಗೆ ಎರಡು ಕ್ಯಾಬಿನೆಟ್ ಹುದ್ದೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಧಾರವಾಡ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿಯಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಷಿಗೆ ಟಿಕೆಟ್‌ ಘೋಷಣೆ ಬೆನ್ನಲ್ಲಿ ಭಾರೀ ಅಸಮಾಧಾನ ಭುಗಿಲೆದ್ದಿತ್ತು. ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನ ಬದಲಾಯಿಸುವಂತೆ ಮಾ.31ರವರೆಗೆ ದಿಂಗಾಲೇಶ್ವರ ಮಹಾಸ್ವಾಮೀಜಿ ಸಮಯವನ್ನು ಕೊಟ್ಟಿದ್ದರು. ಬೇರೆ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಕಣಕ್ಕಿಳಿಸಲು ಸ್ವಾಮೀಜಿಗಳು ಆಗ್ರಹಿಸಿದ್ದರು. ಇಲ್ಲವಾದರೆ ಪ್ರಲ್ಹಾದ ಜೋಷಿ ಯನ್ನು ಸೋಲಿಸುವುದೇ ನನ್ನ ಮುಖ್ಯ ಉದ್ದೇಶ ಎಂದು ಸ್ವಾಮೀಜಿಗಳು ಹೇಳಿದ್ದರು.

ಜೋಶಿ ವಿರುದ್ಧ ವಾಗ್ಧಾಳಿ ನಡೆಸಿದ್ದ ದಿಂಗಾಲೇಶ್ವರ ಮಹಾಸ್ವಾಮೀಜಿ, ಬಿಎಸ್‌ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಪ್ರಲ್ಹಾದ ಜೋಷಿ , ತಾವೇ ಸಿಎಂ ಆಗಬೇಕೆಂದು ಪ್ರಲ್ಹಾದ ಜೋಷಿ ಜಾಕೆಟ್ ಹೊಲಿಸಿದ್ರು, ನಮ್ಮ ಹೋರಾಟದಿಂದಾಗಿ ಅವರ ಜಾಕೆಟ್ ಪಾಕೆಟ್ ಸೇರಿತು, ನಾವು ಯಾರ ಒತ್ತಡಕ್ಕೂ ಒಳಗಾಗುವ ಸ್ವಾಮೀಜಿಗಳಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಧಾರವಾಡ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಲಾಗಿದೆ. ಪ್ರತಿಯೊಂದು ರೀತಿಯಲ್ಲಿ ನಮಗೆ ಅನ್ಯಾಯ ಆಗಿದೆ. ನಾನು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ನಮ್ಮ ಕೆಲಸ ಮಾಡಲು ಲಿಂಗಾಯತ ನಾಯಕರು ಇಲ್ವಾ ಎಂದು ಕೇಳಿದ್ದರು. ಆದ್ದರಿಂದ ನಾವು ಕೂಡ ಈಗ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದ್ದರು.

ಲಿಂಗಾಯತ ಹಾಗೂ ಇತರ ಸಮಾಜದ ನಾಯಕರನ್ನು, ನೌಕರ, ವ್ಯಾಪಾರಿಗಳು ಸೇರಿದಂತೆ ಹಲವರು ಸಚಿವರಿಂದ ತುಳಿತಕ್ಕೆ ಒಳಗಾಗಿದ್ದಾರೆ. ಇವರ ಸೇಡಿನ ರಾಜಕಾರಣದಿಂದ ಅನೇಕ ನಾಯಕರು ಜಾತ್ಯಾತೀತವಾಗಿ ತುಳಿತಕ್ಕೆ ಒಳಗಾಗಿ, ಮಾನಸಿಕ, ದೈಹಿಕ, ಆರ್ಥಿಕ, ರಾಜಕೀಯವಾಗಿ ಹಿಂಸೆ ಅನುಭವಿಸಿದ್ದಾರೆ. ಐಟಿ, ಇಡಿ ಇತರ ದಾಳಿಯ ಭಯ ಸೃಷ್ಟಿಸಿ ಬಾಯಿ ಬಿಟ್ಟು ಮಾತನಾಡದ ಹಾಗೆ ಮಾಡಿದ್ದಾರೆ. ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಪ್ರಲ್ಹಾದ ಜೋಷಿ ತಮ್ಮ ಹಿಂಬಾಲಕರನ್ನು ಸೇರಿಸಿ ಪ್ರಮಾಣಿಕರನ್ನು ಬದಿಗೆ ಸರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇದೇ ನಿಮ್ಮ ನಿಜದವಾದ ಜಾತಕ..’; ಪ್ರಲ್ಹಾದ ಜೋಷಿ ‘ರಾಜಕೀಯ ತಂತ್ರಗಾರಿಕೆ’ ವಾಟ್ಸಾಪ್ ಸಂದೇಶ ವೈರಲ್

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...