Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...