Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...