Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...