Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...