Homeಮುಖಪುಟಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಜನಪರ ಜಾಲತಾಣಗಳ ಸಮಾಗಮ: ಓದುಗರಿಗೆ ಆರೋಗ್ಯಕರ ಸುದ್ದಿ ನೀಡುವ ವಿಶ್ವಾಸದಲ್ಲಿ ’ಡಿಜಿಪಬ್’

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ.

- Advertisement -
- Advertisement -

ಪ್ರತಿ ದಿನ ಒಂದಲ್ಲ ಒಂದು ಕಾರಣಕ್ಕೆ ಮಾಧ್ಯಮಗಳನ್ನು ಟೀಕಿಸುತ್ತಲೇ ಇರುತ್ತೇವೆ. ಆ ಸುದ್ದಿ ಹಾಗಿದೆ, ಇ ಸುದ್ದಿ ಹೀಗಿದೆ. ಎಷ್ಟು ಸೆನ್ಸಿಟಿವ್ ವಿಷಯ ಹೀಗೆ ತೋರಿಸ್ತಿದ್ದಾರೆ ಹಾಗೆ ಹೀಗೆ ಅಂತಾ ಗೋಣಗಿಕೊಳ್ಳುತ್ತೇವೆ. ಇಂತಹ ಟೀಕೆ, ವಿಮರ್ಶೆ ಹಿನ್ನಲೆ, ಡಿಜಿಟಲ್ ಯುಗಕ್ಕೆ ಆರೋಗ್ಯಕರ ಸುದ್ದಿ ಪರಿಸರ ವ್ಯವಸ್ಥೆಯನ್ನು ರಚಿಸಲು 11 ಡಿಜಿಟಲ್ ಸುದ್ದಿ ಸಂಸ್ಥೆಗಳು ಮಂಗಳವಾರ ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ಪ್ರಾರಂಭಿಸಿವೆ.

“ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ಅನ್ನು ದೃಢವಾದ ಡಿಜಿಟಲ್ ನ್ಯೂಸ್ ಪರಿಸರ ವಿಜ್ಞಾನವನ್ನು ನಿರ್ಮಿಸಲು, ಉತ್ತಮ ಅಭ್ಯಾಸಗಳನ್ನು ಪ್ರತಿನಿಧಿಸಲು, ವರ್ಧಿಸಲು ಮತ್ತು ವಿಕಸಿಸಲು ರಚಿಸಲಾಗಿದೆ. ಡಿಜಿಪಬ್ ನಿಜವಾಗಿಯೂ ವಿಶ್ವ ದರ್ಜೆಯ, ಸ್ವತಂತ್ರ ಮತ್ತು ಪತ್ರಿಕೋದ್ಯಮದ ಉನ್ನತ ಗುಣಮಟ್ಟವನ್ನು ಎತ್ತಿಹಿಡಿಯುತ್ತದೆ” ಎಂದು ಸಂಘ ಪತ್ರಿಕಾ ಪ್ರಕಟಣೆ ತಿಳಿಸಿದೆ.

“ಪರಂಪರೆ ಮಾಧ್ಯಮದ ಅನ್ವೇಷಣೆಗಳು ಮತ್ತು ಆಸಕ್ತಿಗಳು ಯಾವಾಗಲೂ ಡಿಜಿಟಲ್ ಮಾಧ್ಯಮದಂತೆಯೇ ಇರಬಾರದು ಎಂಬ ಅಂಶವನ್ನು ಒತ್ತಿಹೇಳುತ್ತದೆ. ಅದರಲ್ಲೂ ವಿಶೇಷವಾಗಿ ನಿಯಂತ್ರಣ, ವ್ಯವಹಾರ ಮಾದರಿಗಳು, ತಂತ್ರಜ್ಞಾನ ಮತ್ತು ರಚನೆಗಳಿಗೆ ಸಂಬಂಧಿಸಿದಂತೆ” ಎಂದು ತಿಳಿಸಿದೆ.

ಆಲ್ಟ್ ನ್ಯೂಸ್, ಆರ್ಟಿಕಲ್ 14, ಬೂಮ್‌ಲೈವ್, ಕೋಬ್ರಾಪೋಸ್ಟ್, ಎಚ್‌ಡಬ್ಲ್ಯೂ ನ್ಯೂಸ್, ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ಸ್ಕ್ರಾಲ್, ನ್ಯೂಸ್ ಮಿನಿಟ್, ಕ್ವಿಂಟ್ ಮತ್ತು ದಿ ವೈರ್ ಡಿಐಜಿಐಪಬ್‌ನ ಸ್ಥಾಪಕ ಸದಸ್ಯ ಸಂಸ್ಥೆಗಳಾಗಿವೆ. ಡಿಜಿಪಬ್ ಸದಸ್ಯತ್ವವು ಪ್ರಸ್ತುತ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಿಜಿಟಲ್ ಸುದ್ದಿ ಮಳಿಗೆಗಳು ಮತ್ತು ಪತ್ರಕರ್ತರಿಗೆ ಸೀಮಿತವಾಗಿದೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಪತ್ರಕರ್ತರನ್ನು ಬಲಿಪಶು ಮಾಡಬೇಡಿ: ಎಡಿಟರ್ಸ್ ಗಿಲ್ಡ್

ಡಿಜಿಟಲ್ ಮಾಧ್ಯಮದಲ್ಲಿ ಕೆಲಸ ಮಾಡುವ ಹವ್ಯಾಸಿ ಮತ್ತು ಸ್ವತಂತ್ರ ಪತ್ರಕರ್ತರಿಗೆ ಡಿಜಿಪಬ್ ಮುಕ್ತವಾಗಿದೆ.  “ಡಿಜಿಟಲ್ ಸುದ್ದಿ ಪರಿಸರ ವ್ಯವಸ್ಥೆಯ ಅಗತ್ಯತೆಗಳನ್ನು ಸಂಸ್ಥೆಗಳು ಮಾತ್ರ ಪ್ರತಿನಿಧಿಸಬೇಕು ಅಥವಾ ಧ್ವನಿ ನೀಡಬೇಕು ಎಂದು ಪ್ರತಿಷ್ಠಾನವು ನಂಬುವುದಿಲ್ಲ. ಈ ವ್ಯವಸ್ಥೆಯ ಭದ್ರಕೋಟೆ ರೂಪಿಸುವಲ್ಲಿ ಸ್ವತಂತ್ರ ಪತ್ರಕರ್ತರ ಕೊಡುಗೆಯನ್ನು ಗುರುತಿಸುವುದು ಕಡ್ಡಾಯವಾಗಿದೆ” ಎಂದು ಪತ್ರಿಕಾ ಪ್ರಕಟಣೆ ಹೇಳಿದೆ.

ನ್ಯೂಸ್ ಮಿನಿಟ್‌ನ ಧನ್ಯಾ ರಾಜೇಂದ್ರನ್ ಅವರು ಸಂಘದ ಮೊದಲ ಅಧ್ಯಕ್ಷರಾಗಿದ್ದಾರೆ. ನ್ಯೂಸ್‌ಕ್ಲಿಕ್‌ನ ಪ್ರಬೀರ್ ಪುರ್‌ಕಯಸ್ಥ ಉಪಾಧ್ಯಕ್ಷರಾಗಿದ್ದಾರೆ. ಕ್ವಿಂಟ್‌ನ ರಿತು ಕಪೂರ್ ಮತ್ತು ನ್ಯೂಸ್‌ಲಾಂಡ್ರಿಯ ಅಭಿನಂದನ್ ಸೇಖ್ರಿ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.

“ಡಿಜಿಟಲ್ ಸುದ್ದಿ ಮಾಧ್ಯಮ ಸಂಸ್ಥೆಗಳು ವಿಶ್ವಾಸಾರ್ಹ ಮಾಹಿತಿಯನ್ನು ಒದಗಿಸಲು ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ನಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ “ಡಿಜಿಟಲ್” ಮೊದಲ ಸುದ್ದಿ ಸಂಸ್ಥೆಗಳ ಈ ಸಂಘಟಿತ ಪ್ರಯತ್ನವು ಸುದ್ದಿ ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ನಮಗೆ ಸಹಾಯ ಮಾಡುತ್ತದೆ” ಎಂದು ರಾಜೇಂದ್ರನ್ ಹೇಳಿದರು.  ಜೊತೆಗೆ “ಇಂದು ಪತ್ರಿಕೋದ್ಯಮವು ಎದುರಿಸುತ್ತಿರುವ ಬೃಹತ್ ಸವಾಲುಗಳನ್ನು ಒಟ್ಟಾಗಿ ಪರಿಹರಿಸಲು ಇದು ನಮಗೆ ಸಹಾಯ ಮಾಡುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

“ಭಾರತದಲ್ಲಿ, ನ್ಯೂಸ್ ಬ್ರಾಡ್ಕಾಸ್ಟಿಂಗ್ ಅಸೋಸಿಯೇಷನ್ ​​ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಇದ್ದರೂ, ದೂರದರ್ಶನ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳು ಕ್ರಮವಾಗಿ ಸ್ವಯಂ ನಿಯಂತ್ರಣ ಹೊಂದಿವೆ. ಆದರೆ ಡಿಜಿಟಲ್ ಮಾಧ್ಯಮ ಸಂಸ್ಥೆಗಳನ್ನು ಪ್ರತಿನಿಧಿಸುವ ಅಂತಹ ಯಾವುದೇ ಸಂಸ್ಥೆ ಇರಲಿಲ್ಲ ಹಾಗಾಗಿ ಡಿಜಿಪಬ್ ಈ ಸ್ಥಾನವನ್ನು ತುಂಬಲು ಪ್ರಯತ್ನಿಸುತ್ತದೆ” ಎಂದು ತಿಳಿಸಿದ್ದಾರೆ.

ಭಾರತದ ಡಿಜಿಟಲ್ ಮಾಧ್ಯಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಳ್ಳುವ ಇತರ ಎರಡು ಸಂಸ್ಥೆಗಳು ಇವೆ. ಒಂದು ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA), ಇದರಲ್ಲಿ ಟೈಮ್ಸ್ ಗ್ರೂಪ್, ಇಂಡಿಯಾ ಟುಡೆ ಗ್ರೂಪ್, ಹಿಂದೂಸ್ತಾನ್ ಟೈಮ್ಸ್, ಎನ್‌ಡಿಟಿವಿ ಸೇರಿವೆ.

ಎರಡನೆಯದು ಇಂಡಿಯನ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್(IDMA), ಇದರಲ್ಲಿ ರಿಪಬ್ಲಿಕ್ ಟಿವಿ, ಇಂಡಿಯಾ ನ್ಯೂಸ್, ಒಡಿಶಾ ಟಿವಿ, ನ್ಯೂಸ್ ಎಕ್ಸ್, ಸಂಡೇ ಗಾರ್ಡಿಯನ್, ಒಪಿಇಂಡಿಯಾ ಮತ್ತು ಗೋವಾ ಕ್ರಾನಿಕಲ್ ಚಾನೆಲ್‌ಗಳು ಸದಸ್ಯರಾಗಿವೆ.

IDMA ಗುಜರಾತ್ ಮತ್ತು ಅಸ್ಸಾಂನ ಎರಡು ಅಸ್ಪಷ್ಟ ಪ್ರಾದೇಶಿಕ ವೆಬ್‌ಸೈಟ್‌ಗಳನ್ನು ಅದರ ಸದಸ್ಯರೆಂದು ಪರಿಗಣಿಸಿದರೆ, DNPA ಡಿಜಿಟಲ್ ಸುದ್ದಿ ನೀಡುವ ಮಾಧ್ಯಮ ಸಂಸ್ಥೆಗಳ ಸಂಘವಾಗಿದೆ. ಆದರೆ ಸಂಪೂರ್ನವಾಗಿ ಡಿಜಿಟಲ್ ಮಾಧ್ಯಮಕ್ಕೆ ಒಂದು ಸಂಸ್ಥೆ ಇಲ್ಲ.

ಮಾಧ್ಯಮಗಳು ತಮ್ಮ ಮಿತಿಗಳನ್ನು ಮೀರುತ್ತಿರುವ ಈ ಸಂದರ್ಭದಲ್ಲಿ, ಮಾಧ್ಯಮಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗುತ್ತಿರುವ ಈ ಸಮಯದಲ್ಲಿ ಆರೋಗ್ಯಕರ ಸುದ್ದಿಗಳನ್ನು ನೀಡುವ ಒಂದು ವೇದಿಕೆಯ ಅವಶ್ಯಕತೆ ಕಂಡಿತ ಇದೆ. ಇದೆ ವಿಶ್ವಾಸವನ್ನು ಡಿಜಿಪಬ್ ವ್ಯಕ್ತಪಡಿಸಿದೆ.


ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...