Homeಕರ್ನಾಟಕಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

- Advertisement -
- Advertisement -

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾದ ಬೆನ್ನಲ್ಲೇ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಉದ್ಘಾಟಿಸಲಾಗಿದೆ.

ಈ ಮೀಡಿಯಾ ಫೋರಂನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀಲ್, ಬಿ.ವಸಂತ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ, ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ, ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್.ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಮ್ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ.

ನೂತನ ಅಧ್ಯಕ್ಷರಾದ ಸಮೀವುಲ್ಲಾ ಅವರು ಮಾತನಾಡಿ, “ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ” ಎಂದರು.

ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ನೂರಾರು ಡಿಜಿಟಲ್ ಮಾಧ್ಯಮ ಪತ್ರಕರ್ತರು, ತಂತ್ರಜ್ಞರು ಹಾಜರಿದ್ದರು.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...