Homeಕರ್ನಾಟಕಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಫೋರಂ ಅಸ್ತಿತ್ವಕ್ಕೆ

- Advertisement -
- Advertisement -

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾದ ಬೆನ್ನಲ್ಲೇ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಉದ್ಘಾಟಿಸಲಾಗಿದೆ.

ಈ ಮೀಡಿಯಾ ಫೋರಂನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ ಬೆಲಗೂರು ಅವರು ಒಮ್ಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀಲ್, ಬಿ.ವಸಂತ ಈಶ್ವರಗೆರೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ, ಜಂಟಿ ಕಾರ್ಯದರ್ಶಿಗಳಾಗಿ ರಜನಿ ಹಾಗೂ ಮಾಲತೇಶ್ ಅರಸ್ ಹರ್ತಿಕೋಟೆ, ಖಜಾಂಚಿಯಾಗಿ ಸನತ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಂ.ಎಸ್.ರಾಘವೇಂದ್ರ, ಗೌರೀಶ್ ಅಕ್ಕಿ, ವಿಜಯ್ ಭರಮಸಾಗರ, ದರ್ಶನ್ ಆರಾಧ್ಯ, ಪ್ರವೀಣ್ ಏಕಾಂತ, ಅಮರ್ ಪ್ರಸಾದ್, ಅಂಕಿತಾ, ಹರೀಶ್ ಅರಸು ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕೋದ್ಯಮ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಎರಡು ದಶಕಗಳ ಅನುಭವ ಇರುವಂತಹ ಹಿರಿಯ ಪತ್ರಕರ್ತರ ನೇತೃತ್ವದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಕರ್ನಾಟಕ ಸ್ಟೇಟ್ ಡಿಜಿಟಲ್ ಮಿಡಿಯಾ ಫೋರಮ್ ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಡಿಜಿಟಲ್ ಮಾಧ್ಯಮ ಮಿತ್ರರನ್ನೂ ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ.

ನೂತನ ಅಧ್ಯಕ್ಷರಾದ ಸಮೀವುಲ್ಲಾ ಅವರು ಮಾತನಾಡಿ, “ಡಿಜಿಟಲ್ ಮೀಡಿಯಾ ಎಂಬುದು ಪ್ರತಿಯೊಬ್ಬರಿಗೂ ನವಯುಗಕ್ಕೆ ಅವಶ್ಯಕವಾಗಿದ್ದು, ಪ್ರಿಂಟ್ ಹಾಗೂ ಟಿವಿ ಮಾಧ್ಯಮಗಳಿಗಿಂತಲೂ ಪರಿಣಾಮಕಾರಿಯಾಗಿದೆ. ವೀಕ್ಷಕರು ಮತ್ತು ಓದುಗರನ್ನು ಹೆಚ್ಚು ತಲುಪಲು ತನ್ನದೇ ಆದ ಸಾಮರ್ಥ್ಯ ಹೊಂದಿದೆ. ಹೀಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೇ ಡಿಜಿಟಲ್ ಮಾಧ್ಯಮಗಳಿಗೆ ಒತ್ತು ನೀಡಿವೆ” ಎಂದರು.

ಪಕ್ಕದ ರಾಜ್ಯಗಳಾದ ಆಂದ್ರಪ್ರದೇಶ ಮತ್ತು ತಮಿಳು ನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಡಿಜಿಟಲ್ ಮಾಧ್ಯಮ ಒಕ್ಕೂಟ ಅಸ್ಥಿತ್ವದಲ್ಲಿವೆ. ಕರ್ನಾಟಕದಲ್ಲಿ ಡಿಜಿಟಲ್ ಮಾಧ್ಯಮ ಹೆಚ್ಚು ಪರಿಣಾಮಕಾರಿಯಾಗಿರುವುದರಿಂದ ನಮ್ಮ ಸಂಘಟನೆ ಮಾಧ್ಯಮ ಲೋಕದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವವರ ಹಿತಾಸಕ್ತಿ ಕಾಪಾಡಲು ಬದ್ದವಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿರುವುದರಿಂದ ಇದರ ಅಗತ್ಯತೆ ಎಂದಿಗಿಂತ ಈಗ ಹೆಚ್ಚಿದೆ. ಹೀಗಾಗಿ ಡಿಜಿಟಲ್ ಮಿಡಿಯಾ ಪೋರಮ್ ನೂತನವಾಗಿ ಅಸ್ತಿತ್ವಕ್ಕೆ ಬಂದಿದ್ದು, ಪತ್ರಿಕೆ ಮತ್ತು ಮಾಧ್ಯಮಗಳಿಗೆ ನೀಡಿರುವಂತೆಯೇ ನಮಗೂ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ನೂರಾರು ಡಿಜಿಟಲ್ ಮಾಧ್ಯಮ ಪತ್ರಕರ್ತರು, ತಂತ್ರಜ್ಞರು ಹಾಜರಿದ್ದರು.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...