HomeಮುಖಪುಟRTI ಕಾಯ್ದೆ ನಿಷ್ಪ್ರಯೋಜಕಗೊಳಿಸಲು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ?

RTI ಕಾಯ್ದೆ ನಿಷ್ಪ್ರಯೋಜಕಗೊಳಿಸಲು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ?

- Advertisement -
- Advertisement -

ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯು ಭಾರತೀಯ ನಾಗರಿಕರ ಮಾಹಿತಿಯ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆದುಕೊಳ್ಳುವ ನಿಬಂಧನೆಗಳನ್ನು ಒಳಗೊಂಡಿದೆ. ಇದು ಸರ್ಕಾರದ ಲೆಕ್ಕಪತ್ರದ ಬಗ್ಗೆ ನಾಗರಿಕರು ತಿಳಿದುಕೊಳ್ಳುವ ಉಪಯುಕ್ತ ಸಾಧನವಾಗಿದೆ. ಆದರೆ ಈಗ ಮಾಹಿತಿ ಹಕ್ಕು ಕಾಯ್ದೆಯು ಬಹುತೇಕ ನಿಷ್ಪ್ರಯೋಜಕವಾಗುತ್ತದೆ.

ಕರಡು ಮಸೂದೆಯಲ್ಲಿ ವಿಶೇಷವಾಗಿ ಎರಡು ಗೊಂದಲದ ನಿಬಂಧನೆಗಳಿವೆ. ಪ್ರಸ್ತಾವಿತ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾನೂನು ಮತ್ತು ಇತರ ಯಾವುದೇ ಕಾನೂನಿನ ನಡುವಿನ ಸಂಘರ್ಷದ ಸಂದರ್ಭದಲ್ಲಿ, ಡೇಟಾ ಸಂರಕ್ಷಣಾ ಕಾನೂನು ಮೇಲುಗೈ ಸಾಧಿಸುತ್ತದೆ ಎಂದು ವಿಭಾಗ 29 (2) ಹೇಳುತ್ತದೆ.

ಕರಡು ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಬಿಲ್‌ನ ಸೆಕ್ಷನ್ 30(2) ಮಾಹಿತಿಯ ಬಹಿರಂಗಪಡಿಸುವಿಕೆಯಿಂದ ವಿನಾಯಿತಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯಿದೆಯ ನಿಬಂಧನೆಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ.

ಮಾಹಿತಿ ಹಕ್ಕು ಕಾಯಿದೆಯಡಿ, ವಿಭಾಗ 8 (1)(j) ಸಾರ್ವಜನಿಕ ಚಟುವಟಿಕೆಯ ಭಾಗವಾಗಿರದ ಅಥವಾ ವ್ಯಕ್ತಿಯ ಗೌಪ್ಯತೆಯ ಆಕ್ರಮಣದ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸುವುದನ್ನು ವಿನಾಯಿತಿ ನೀಡುತ್ತದೆ.

ಕಾನೂನಿನ ಪ್ರಕಾರ, ವೈಯಕ್ತಿಕ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಅಥವಾ ಆಸಕ್ತಿಗೆ ಸಂಬಂಧಿಸದಿದ್ದರೆ ಅಥವಾ ವ್ಯಕ್ತಿಯ ಗೌಪ್ಯತೆಗೆ ಅನಗತ್ಯವಾದುದಾಗಿದ್ದರೆ ಅಂತಹ ಮಾಹಿತಿಗೆ ವಿನಾಯತಿ ನೀಡಬಹುದು.

ಸೆಕ್ಷನ್ 8 (1)(ಜೆ) ಅಡಿಯಲ್ಲಿ ಬಹಿರಂಗಪಡಿಸುವಿಕೆಗೆ ವಿನಾಯಿತಿ ಇದೆ ಎಂದು ಯಾರು ಕ್ಲೈಮ್ ಮಾಡುತ್ತಾರೋ ಅವರು ಈ ಮಾಹಿತಿಯನ್ನು ಸಂಸತ್ತಿಗೆ ನೀಡುವುದಿಲ್ಲ ಎಂದು ಘೋಷಿಸುತ್ತಾರೆ. ಇದು ಸಂವಿಧಾನದ ಆರ್ಟಿಕಲ್ 19 (2) ಕ್ಕೆ ಅನುಗುಣವಾಗಿ, ಸ್ವಾತಂತ್ರ್ಯದ ಹಕ್ಕಿನ ಮೇಲೆ ಸಮಂಜಸವಾದ ನಿರ್ಬಂಧಗಳು ಮತ್ತು ಗೌಪ್ಯತೆಗೆ ಸಾಕಷ್ಟು ರಕ್ಷಣೆಯನ್ನು ಕೊಡುತ್ತದೆ.

ಆದರೆ ಪ್ರಸ್ತಾವಿತ ಡಿಜಿಟಲ್ ಡೇಟಾ ಸಂರಕ್ಷಣಾ ಮಸೂದೆಯು ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 8 (1) (ಜೆ) ಅನ್ನು ತಿದ್ದುಪಡಿ ಮಾಡಲು ಯೋಜಿಸಿದೆ ಮತ್ತು ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯ ಮೇಲಿನ ವಿನಾಯಿತಿ ಮತ್ತು ನಿಬಂಧನೆಗೆ ಸಂಬಂಧಿಸಿದ ಸಂಪೂರ್ಣ ಭಾಗವನ್ನು ಬಿಟ್ಟುಬಿಡುತ್ತದೆ. ಹೀಗಾಗಿ, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನಿರಾಕರಿಸಲು ಇದನ್ನು ಬಳಸಲು ಸಾಧ್ಯವಾಗುತ್ತದೆ.

ಮಾಹಿತಿ ಹಕ್ಕು ಕಾಯಿದೆಯು 17 ವರ್ಷಗಳಿಂದ ಗೌಪ್ಯತೆಗೆ ರಕ್ಷಣೆ ನೀಡುವ ವಿಚಾರದಲ್ಲೂ ತನ್ನ ಕೆಲಸವನ್ನು ಉತ್ತಮವಾಗಿ ನಿರ್ವಹಿಸಿದೆ. ಈವರೆಗೂ ಯಾವುದೇ ಗೌಪ್ಯತೆಯ ಉಲ್ಲಂಘನೆ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: ಪಿಎಂ ಕೇರ್ಸ್ ಸರ್ಕಾರದ ನಿಯಂತ್ರಣದಲ್ಲಿಲ್ಲ, ಅದೊಂದು ಚಾರಿಟಬಲ್ ಟ್ರಸ್ಟ್: ಕೇಂದ್ರ ಸರ್ಕಾರ ಅಫಿಡವಿಟ್‌

ಮಾಹಿತಿ ಹಕ್ಕು ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಯು ಹೇಗೆ ಹಾನಿಕರವೆಂದು ಎಂಬುದಕ್ಕೆ ಕೆಲವು ಉದಾಹರಣೆಗಳು ಇಲ್ಲಿವೆ:-

1. 2003 ರಲ್ಲಿ, ಈ ಲೇಖನದ ಲೇಖಕರು ಮುಂಬೈ ಪೊಲೀಸರಿಗೆ ಪೊಲೀಸ್ ವರ್ಗಾವಣೆಯನ್ನು ಶಿಫಾರಸು ಮಾಡಿದ ರಾಜಕಾರಣಿಗಳ ಪಟ್ಟಿಯನ್ನು ಕೇಳಿದರು ಏಕೆಂದರೆ ಇದು ಕಾನೂನಿಗೆ ವಿರುದ್ಧವಾಗಿದೆ. ಪಟ್ಟಿಯನ್ನು ಪಡೆದಾಗ (ಕೆಲವು ಮನವಿಗಳ ನಂತರ) ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಪೊಲೀಸ್ ಆಯುಕ್ತರು ಛೀಮಾರಿ ಹಾಕಿದರು ಮತ್ತು ಎಚ್ಚರಿಕೆ ನೀಡಿದರು. ಕಾನೂನನ್ನು ತಿದ್ದುಪಡಿ ಮಾಡಿದರೆ, ಅದು ಪೊಲೀಸ್ ಅಧಿಕಾರಿಗಳ ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದೆ ಎಂಬ ಕಾರಣಕ್ಕಾಗಿ ಮಾಹಿತಿಯನ್ನು ನಿರಾಕರಿಸಬಹುದು.

2. ಡಿಸೆಂಬರ್ 2005 ರಲ್ಲಿ, ಈ ಲೇಖನದ ಲೇಖಕರು ಮುಂಬೈನ ಐಕಾನಿಕ್ ಕ್ರಾಫರ್ಡ್ ಮಾರುಕಟ್ಟೆಯನ್ನು ಪುನರಾಭಿವೃದ್ಧಿ ಮಾಡಬೇಕಾದ ನಿಯಮಗಳ ವಿವರಗಳನ್ನು ಕೇಳಿದರು. 100 ಕೋಟಿ ರೂಪಾಯಿ ಹೂಡಿಕೆಯ ಮೇಲೆ ಡೆವಲಪರ್‌ಗೆ 1,000 ಕೋಟಿ ರೂಪಾಯಿ ಲಾಭವಾಗಲಿದೆ ಮತ್ತು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕೇವಲ 40 ಕೋಟಿ ರೂಪಾಯಿಗಳನ್ನು ಪಡೆಯಲಿದೆ ಎಂದು ವಿವರಗಳು ಬಹಿರಂಗಪಡಿಸಿವೆ. ಇದರಿಂದ ಸಾರ್ವಜನಿಕರ ಆಕ್ರೋಶಗೊಂಡು ಒಪ್ಪಂದವನ್ನು ನಿಲ್ಲಿಸಲು ಕಾರಣವಾಯಿತು.

3. ಹೆಚ್ಚಿನ ರಾಜ್ಯಗಳಲ್ಲಿ, ಸುಮಾರು 20% ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಷರತ್ತಿನ ಮೇಲೆ ಖಾಸಗಿ ಆಸ್ಪತ್ರೆಗಳಿಗೆ ಭಾರಿ ರಿಯಾಯಿತಿಗಳನ್ನು ನೀಡಲಾಗುತ್ತದೆ. 2010 ರಲ್ಲಿ ಕಾರ್ಯಕರ್ತ ದಿನೇಶ್ ಕೌಶಿಕ್ ದೆಹಲಿಯ ದೀನ್ ದಯಾಳ್ ಆಸ್ಪತ್ರೆಗೆ ದಾಖಲಾಗಿರುವ ಅಂತಹ ರೋಗಿಗಳ ವಿವರಗಳನ್ನು ಕೇಳಿದರು. ಬಾಧ್ಯತೆ ಈಡೇರುತ್ತಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಒಂದುವೇಳೆ ಈ ಕಾನೂನನ್ನು ತಿದ್ದುಪಡಿ ಮಾಡಿದರೆ, ಅದು ಡೆವಲಪರ್ ಅಥವಾ ಆಸ್ಪತ್ರೆಯ ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದೆ ಎಂಬ ಆಧಾರದ ಮೇಲೆ ಮಾಹಿತಿಯನ್ನು ನಿರಾಕರಿಸಬಹುದು.

4. ಮೇ 2006 ರಲ್ಲಿ, ಮಹಾರಾಷ್ಟ್ರ ಅರಣ್ಯ ಸಚಿವ ಸುರುಪ್‌ಸಿನ್ಹ ಹಿರಿಯ ನಾಯಕ್‌ಗೆ ಅರಣ್ಯಗಳಲ್ಲಿ ಗರಗಸ ಗಿರಣಿಗಳನ್ನು ನಡೆಸಲು ಅನುಮತಿ ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ 30 ದಿನಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಅವರು ಎದೆ ನೋವಿನ ಬಗ್ಗೆ ದೂರು ನೀಡಿದರು ಮತ್ತು ಅವರ ಜೈಲು ಶಿಕ್ಷೆಯನ್ನು ಪೂರೈಸಲು ಮುಂಬೈನ ಜೆಜೆ ಆಸ್ಪತ್ರೆಯಲ್ಲಿ ಆರಾಮದಾಯಕವಾದ ಹವಾನಿಯಂತ್ರಿತ ಕೋಣೆಯನ್ನು ತಕ್ಷಣವೇ ನೀಡಲಾಯಿತು.

ಅವರು ಸುಳ್ಳು ಅನಾರೋಗ್ಯದ ಮೂಲಕ ಜೈಲುವಾಸವನ್ನು ತಪ್ಪಿಸುತ್ತಿದ್ದಾರೆ ಎಂದು ಅನುಮಾನಿಸಿದ ಲೇಖಕರು ಅವರ ವೈದ್ಯಕೀಯ ದಾಖಲೆಗಳನ್ನು ಹುಡುಕಿದರು. ಈ ವಿಷಯವನ್ನು ಮಾರ್ಚ್ 2007 ರಲ್ಲಿ ಬಾಂಬೆ ಹೈಕೋರ್ಟಿನಲ್ಲಿ ಇತ್ಯರ್ಥಗೊಳಿಸಲಾಯಿತು, ಅದು ಹೇಳುತ್ತದೆ, “ಯಾವ ಸಂದರ್ಭದಲ್ಲಿ ಸಂಸತ್ತಿಗೆ ಅಥವಾ ರಾಜ್ಯ ಶಾಸಕಾಂಗಕ್ಕೆ ಕೋರಿದ ಮಾಹಿತಿಯನ್ನು ನಿರಾಕರಿಸಲಾಗುವುದಿಲ್ಲ, ಆಗ ಆ ಮಾಹಿತಿಯನ್ನು ನಿರಾಕರಿಸುವುದಿಲ್ಲ.” ಕಾನೂನನ್ನು ತಿದ್ದುಪಡಿ ಮಾಡಿದರೆ, ಅದು ರಾಜಕಾರಣಿಯ ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದೆ ಎಂಬ ಕಾರಣಕ್ಕೆ ಮಾಹಿತಿಯನ್ನು ನಿರಾಕರಿಸಬಹುದು.

5. ಮುಂಬೈನಲ್ಲಿ ಕಾರ್ಯಕರ್ತ ಆನಂದ್ ಭಂಡಾರೆ ಅವರು ಕಾರ್ಪೊರೇಟರ್‌ಗಳು ಖರ್ಚು ಮಾಡಿದ ಹಣ, ಅವರ ಹಾಜರಾತಿ ಮತ್ತು ಕಾರ್ಯಕ್ಷಮತೆಯ ವಿವರಗಳನ್ನು ಕೋರಿ ಮಾಹಿತಿ ಹಕ್ಕು ಪ್ರಶ್ನೆಗಳನ್ನು ಸಲ್ಲಿಸುವ ಮೂಲಕ ಅವರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಾರೆ.

ಕಾನೂನಿಗೆ ತಿದ್ದುಪಡಿ ತಂದರೆ ಕಾರ್ಪೊರೇಟರ್ ಗಳ ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ್ದು ಎಂಬ ಕಾರಣಕ್ಕೆ ಮಾಹಿತಿ ನಿರಾಕರಿಸಬಹುದು.

ಈ ಉದಾಹರಣೆಗಳ ಪಟ್ಟಿಯು ತೋರಿಸುವಂತೆ, ಸೆಕ್ಷನ್ 29 (2) ಮಾಹಿತಿ ಹಕ್ಕು ಕಾಯಿದೆಯನ್ನು ಅತಿಕ್ರಮಿಸಲು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಸಕ್ರಿಯಗೊಳಿಸುತ್ತದೆ.

ವಿಭಾಗ 29 (2) ಅನ್ನು ಬದಲಾಯಿಸಬೇಕು ಮತ್ತು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯಿಂದ ವಿಭಾಗ 30 (2) ಅನ್ನು ಕೈಬಿಡಬೇಕು. ಈ ಪ್ರಸ್ತಾವಿತ ನಿಬಂಧನೆಗಳು ಸಂವಿಧಾನದ 19(1)(ಎ) ವಿಧಿ 19(2) ನಲ್ಲಿನ ಅನುಮತಿಸುವ ನಿರ್ಬಂಧಗಳನ್ನು ಮೀರಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ.

ಈಗಾಗಲೇ 3,000ಕ್ಕೂ ಹೆಚ್ಚು ನಾಗರಿಕರು ಮಾಹಿತಿ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುವುದನ್ನು ತಡೆಯುವಂತೆ ಪ್ರಧಾನಿಗೆ ಸಲ್ಲಿಸಿದ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...