Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...