Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...