Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...