Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...