Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...