Homeಎಕಾನಮಿಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

ಇಂದಿನ ಬಜೆಟ್‌ನಲ್ಲಿ ಪ್ರಸ್ತಾಪವಾದ ಡಿಜಿಟಲ್ ರುಪಿ: ಹಾಗೆಂದರೇನು?

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರು ಡಿಜಿಟಲ್ ರುಪಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದು 2022-23 ರಿಂದ ಚಾಲ್ತಿಗೆ ಬರಲಿದೆ ಎಂದಿದ್ದಾರೆ. ಇದರ ಕುರಿತ ಪ್ರಾಥಮಿಕ ಮಾಹಿತಿಗಳು ಇಲ್ಲಿವೆ.

CBDC ಎಂದರೇನು?

CBDC ಒಂದು ಡಿಜಿಟಲ್ ರೂಪದಲ್ಲಿ ಕೇಂದ್ರ ಬ್ಯಾಂಕ್ ನೀಡಿದ ಕಾನೂನಾತ್ಮಕ ಟೆಂಡರ್ ಆಗಿದೆ. ಇದು ಕಾಗದದಲ್ಲಿ ನೀಡಲಾದ ಫಿಯೆಟ್ ಕರೆನ್ಸಿಯನ್ನು ಹೋಲುತ್ತದೆ ಮತ್ತು ಯಾವುದೇ ಫಿಯೆಟ್ ಕರೆನ್ಸಿಯೊಂದಿಗೆ ಬದಲಾಯಿಸಕೊಳ್ಳಬಹುದು.

CBDC ಯನ್ನು ಯಾರು ಪ್ರಾರಂಭಿಸುತ್ತಾರೆ?

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ಆರ್ಥಿಕ ವರ್ಷದ ಸಾಲಿನಿಂದ CBDCಯನ್ನು ಪ್ರಾರಂಭಿಸಲ್ಲಿದೆ. ಬ್ಲಾಕ್‌ಚೈನ್ ತಂತ್ರಜ್ಞಾನದಿಂದ ಬೆಂಬಲಿತವಾಗಿರುವ CBDCಯನ್ನು ಪ್ರಾರಂಭಿಸುವ ಯೋಜನೆಯನ್ನು ಸರ್ಕಾರ ಹಾಕಿಕೊಂಡಿದೆ. ಬ್ಲಾಕ್‌ಚೈನ್ ಮೂಲತಃ ಡಿಜಿಟಲ್ ಲೆಡ್ಜರ್ ಆಗಿದ್ದು ಅದು  ವಹಿವಾಟುಗಳನ್ನು ಟ್ರ್ಯಾಕ್ ಮಾಡಿ ದಾಖಲಿಸುತ್ತದೆ. ಇದಕ್ಕೆ ಶೇ.1 ರಷ್ಟು ಟಿಡಿಎಸ್ ವಿಧಿಸಲು ಸರ್ಕಾರ ಮುಂದಾಗಿದೆ.

CBDCಯ ಅವಶ್ಯಕತೆ ಏನು?

ಇನ್ವೇಸ್ಟೋಪಿಡೀಯಾದ ಪ್ರಕಾರ, ಡಿಜಿಟಲ್ ಮತ್ತು ನಿಯಂತ್ರಿತ ಅನುಕೂಲತೆ ಮತ್ತು ಭದ್ರತೆಯನ್ನು ಬಳಕೆದಾರರಿಗೆ ಒದಗಿಸುವ ಗುರಿಯನ್ನು ಇದು ಹೊಂದಿದೆ. ಡಿಜಿಟಲ್ ವಹಿವಾಟನ್ನು ಉತ್ತೇಜಿಸುತ್ತದೆ.

ಬಜೆಟ್‌ನಲ್ಲಿ ಘೋಷಣೆಯ ಅರ್ಥವೇನು?

ಬಜೆಟ್‌ನಲ್ಲಿನ ಇದರ ಪ್ರಕಟಣೆಯು ಕ್ರಿಪ್ಟೋಕರೆನ್ಸಿ ಮತ್ತು ಇತರೆ ವರ್ಚುವಲ್ ಕರೆನ್ಸಿ ಮೇಲೆ ಸರ್ಕಾರದ ಮಹತ್ವಾಕಾಂಕ್ಷೆಯನ್ನು ವ್ಯಕ್ತಪಡಿಸುತ್ತದೆ. ಹಲವಾರು ಸಂದರ್ಭಗಳಲ್ಲಿ ಬಿಟ್ ಕಾಯಿನ್ ಇತರೆ ಮುಂತಾದ ಖಾಸಗಿ ಕ್ರಿಪ್ಟೋಕರೆನ್ಸಿಗಳೊಂದಿಗೆ ಮನಿಲಾಂಡರಿಂಗ್, ಭಯೋತ್ಪಾದನೆ ಹಣಕಾಸು ಸಹಾಯದಂತಹ ದೂರುಗಳು ಬಂದಿದೆ. ಅದನ್ನು ಬಗೆಹರಿಸಲು ಆರ್‌ಬಿಐ ತನ್ನದೇ ಆದ CBDCಯನ್ನು ಘೋಷಿಸಲು ಯೋಜಿಸಿದೆ.

ಇದು ನಾಗರಿಕರಿಗೆ ಹೇಗೆ ಸಹಾಯಕ?

ಡಿಜಿಟಲ್ ರುಪಿಯನ್ನು ಹೇಗೆ ವಹಿವಾಟು ಮಾಡಬಹುದು ಎಂಬುದರ ಕುರಿತು ತಂತ್ರಜ್ಞಾನ ತಜ್ಞರು ಪ್ರಸ್ತಾಪಿಸಿದ್ದಾರೆ. ಆದರೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಔಪಚಾರಿಕ ಪ್ರಕಟಣೆ ಇನ್ನಷ್ಟೆ ಹೊರಬರಬೇಕಿದೆ. ಒಂದು ಪ್ರಮುಖ ವ್ಯತ್ಯಾಸವೆಂದರೆ ಪ್ರಸ್ತುತ ಡಿಜಿಟಲ್ ಪಾವತಿ ಅನುಭವಕ್ಕೆ ವಿರುದ್ಧವಾಗಿ ಡಿಜಿಟಲ್ ರುಪಿ ವಹಿವಾಟು ತಕ್ಷಣವೇ ಆಗುತ್ತದೆ ಎನ್ನಲಾಗಿದೆ.


ಇದನ್ನೂ ಓದಿ; ಜನಸಾಮಾನ್ಯರಿಗೆ ಶೂನ್ಯ ಕೊಡುಗೆಯ ಬಜೆಟ್: ವಿಪಕ್ಷಗಳ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...